Home ಟಾಪ್ ಸುದ್ದಿಗಳು ಕಾಫಿನಾಡ ಬಯಲುಸೀಮೆ ಭಾಗದಲ್ಲಿ ಮಳೆ ಅಬ್ಬರ

ಕಾಫಿನಾಡ ಬಯಲುಸೀಮೆ ಭಾಗದಲ್ಲಿ ಮಳೆ ಅಬ್ಬರ

ಚಿಕ್ಕಮಗಳೂರು :ಅಜ್ಜಂಪುರ ತಾಲೂಕಿನಾದ್ಯಂತ ವರುಣನ ಅಬ್ಬರ ಮುಂದುವರಿದಿದ್ದು, ಭಾರಿ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

 ಅಜ್ಜಂಪುರ ಪಟ್ಟಣದ ರಸ್ತೆಗಳು ಜಲಾವೃತಗೊಂಡಿದ್ದು, ವಾಹನಗಳು ಚಲಾಯಿಸಲು ಆಗದೇ ನಡು ರಸ್ತೆಯಲ್ಲಿ ಕೆಟ್ಟು ನಿಂತಿದ್ದವು.

ಹೊಲಗದ್ದೆಗಳು ಮುಳುಗಡೆ, ಮನೆಗಳಿಗೂ ಮಳೆ ನೀರು ನುಗ್ಗಿದ್ದು, ಬಯಲುಸೀಮೆಯಲ್ಲಿ ವರುಣನ ಪ್ರತಾಪ ಕಂಡು ಜನರು ಕಂಗಾಲಾಗಿದ್ದಾರೆ.

Join Whatsapp
Exit mobile version