Home ಟಾಪ್ ಸುದ್ದಿಗಳು ಜೂನ್ 4ರ ನಂತರ ಬಿಜೆಪಿ ಕುಟುಂಬ ರಾಜಕಾರಣದಿಂದ ಮುಕ್ತ: ಯತ್ನಾಳ್

ಜೂನ್ 4ರ ನಂತರ ಬಿಜೆಪಿ ಕುಟುಂಬ ರಾಜಕಾರಣದಿಂದ ಮುಕ್ತ: ಯತ್ನಾಳ್

ಕಾರವಾರ: ಜೂನ್ 4ರ ನಂತರ ಕುಟುಂಬ ರಾಜಕಾರಣದಿಂದ ಬಿಜೆಪಿ ಮುಕ್ತವಾಗಲಿದೆ ಎಂದು ಹೈಕಮಾಂಡ್ ನನಗೆ ಭರವಸೆ ನೀಡಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಕುಮಟಾದಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಹೇಳುವ ವಿಚಾರವನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಬೇಕು. ಮುಜುಗರ ಆಗದ ರೀತಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಹೈಕಮಾಂಡ್ ಗೆ ಮನವಿ ಮಾಡುತ್ತೇನೆ. ರಾಜ್ಯದಲ್ಲಿ ಎಲ್ಲಾ 28 ಲೋಕಸಭೆ ಕ್ಷೇತ್ರಗಳಲ್ಲಿ ಗೆಲ್ಲುವುದು ನಮ್ಮ ಗುರಿಯಾಗಿದೆ ಎಂದು ತಿಳಿಸಿದ್ದಾರೆ.

ಈ ಚುನಾವಣೆಯಲ್ಲಿ ಅಸಮಾಧಾನಿತರೆಲ್ಲರೂ ವೈಯಕ್ತಿಕ ವಿಚಾರ ಬಿಟ್ಟು ಪ್ರಧಾನಿ ನರೇಂದ್ರ ಮೋದಿಯವರಿಗಾಗಿ ಒಟ್ಟಿಗೆ ಕೆಲಸ ಮಾಡಬೇಕಾಗಿದೆ ಎಂದರು.

Join Whatsapp
Exit mobile version