Home ಟಾಪ್ ಸುದ್ದಿಗಳು ಅಂಗನವಾಡಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಸದಿರಿ: ಬೊಮ್ಮಾಯಿ ಸರ್ಕಾರಕ್ಕೆ ಹೈಕೋರ್ಟ್ ವಾರ್ನಿಂಗ್

ಅಂಗನವಾಡಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಸದಿರಿ: ಬೊಮ್ಮಾಯಿ ಸರ್ಕಾರಕ್ಕೆ ಹೈಕೋರ್ಟ್ ವಾರ್ನಿಂಗ್

ಬೆಂಗಳೂರು: ಸಮಗ್ರ ಮಕ್ಕಳ ಅಭಿವೃದ್ಧಿ ಯೋಜನೆ (ICDS) ಮೂಲಕ ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡುತ್ತಿರುವ ಕಳಪೆ ಗುಣಮಟ್ಟದ ಆಹಾರವನ್ನು ತಕ್ಷಣ ನಿಲ್ಲಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

ಇದಕ್ಕೆ ಸಂಬಂಧಿಸಿದಂತೆ ಬಾಗಲಕೋಟೆಯ ಸಂಗೀತ ಗದಗಿನ ಮತ್ತು ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಋತುರಾಜ್‌ ಅವಸ್ಥಿ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಅ ಪೌಷ್ಟಿಕಾಂಶದಿಂದ ಕೂಡಿದ ಮತ್ತು ಆಹಾರ ಮಾನದಂಡಕ್ಕೆ ಯೋಗ್ಯವಲ್ಲದ ಆಹಾರ ಉತ್ಪನ್ನಗಳನ್ನು ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡಬಾರದು. ಕೇಂದ್ರ ಸರ್ಕಾರದ ಆಹಾರ ಮಾನದಂಡಗಳ ಅನುಗುಣವಾಗಿ ಮಾತ್ರವೇ ಆಹಾರ ಪೂರೈಕೆ ನಡೆಸಬೇಕು. ಈ ನಿಟ್ಟಿನಲ್ಲಿ ಸೂಕ್ತ ಕ್ರಮವನ್ನು ಜರುಗಿಸಬೇಕು. ICDS ಯೋಜನೆಯನ್ನು ರಾಜ್ಯದೆಲ್ಲೆಡೆ ಜಾರಿಗೊಳಿಸಬೇಕು ಎಂದು ಪೀಠ ಆದೇಶದಲ್ಲಿ ಸೂಚಿಸಿದೆ.

ಕೊರೊನಾದಿಂದಾಗಿ ICDS ಯೋಜನೆಯ ಫಲಾನುಭವಿಗಳಾ ಪರಿಸ್ಥಿತಿ ಹೀನಾಯವಾಗಿದೆ. ಈ ನಿಟ್ಟಿನಲ್ಲಿ ಫಲಾನುಭವಿಗಳಿಗೆ ಪೌಷ್ಟಿಕಾಂಶದ ಆಹಾರವನ್ನು ಪೂರೈಸುವಂತೆ ನ್ಯಾಯಪೀಠ ಕಟ್ಟುನಿಟ್ಟಿನ ತಾಕೀತು ಮಾಡಿದೆ.

ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಲಕ್ಷ್ಮಿ ಅಯ್ಯಂಗಾರ್, ಎ.ಎಸ್. ಪೊನ್ನಣ್ಣ ವಾದಿಸಿದ್ದರು.

Join Whatsapp
Exit mobile version