Home ಟಾಪ್ ಸುದ್ದಿಗಳು ಹೈಕೋರ್ಟ್ ನ ಮಾಜಿ ನ್ಯಾಯಾಧೀಶರು ಸೇರಿ 18 ಕಾಂಗ್ರೆಸ್ಸಿಗರು ಬಿಜೆಪಿಗೆ

ಹೈಕೋರ್ಟ್ ನ ಮಾಜಿ ನ್ಯಾಯಾಧೀಶರು ಸೇರಿ 18 ಕಾಂಗ್ರೆಸ್ಸಿಗರು ಬಿಜೆಪಿಗೆ

ಕೇರಳದ ಹೈಕೋರ್ಟ್‌ನ ಇಬ್ಬರು ಮಾಜಿ ನ್ಯಾಯಾಧೀಶರಾದ ಪಿ.ಎನ್.ರವೀಂದ್ರನ್ ಮತ್ತು ವಿ ಚೀತಂಬರೇಶ್ ಸೇರಿದಂತೆ 18 ಜನರು ಭಾನುವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗದ ವಿ ಚೀತಂಬರೇಶ್ ಅವರು “ಪಾಲಕ್ಕಾಡ್  ವಿಕ್ಟೋರಿಯಾ ಕಾಲೇಜಿನಲ್ಲಿ ಓದುತ್ತಿದ್ದಾಗಲೇ ನಾನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತನಾಗಿದ್ದೆ ಮತ್ತು ದೀರ್ಘಕಾಲ ಬಿಜೆಪಿ ಬೆಂಬಲಿಗನಾಗಿದ್ದೆ”ಎಂದು ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ಮಾಜಿ ನ್ಯಾಯಾಧೀಶರ ಜೊತೆಗೆ ಮಾಜಿ ಡಿಜಿಪಿ ವೇಣುಗೋಪಾಲ್ ನಾಯರ್, ಅಡ್ಮಿರಲ್ ಬಿಆರ್ ಮೆನನ್ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ನ ಮಾಜಿ ಜನರಲ್ ಮ್ಯಾನೇಜರ್ ಸೋಮಚುದನ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರಿದ್ದಾರೆ.

ಪಿಎನ್ ರವೀಂದ್ರನ್ ಮತ್ತು ಚೀತಂಬರೇಶ್ ಅವರು ಇತ್ತೀಚೆಗೆ ಉತ್ತರಪ್ರದೇಶದಲ್ಲಿ ಜಾರಿಗೆ ಬಂದಿರುವ ‘ಲವ್ ಜಿಹಾದ್ ಕಾನೂನುಗಳನ್ನು ಬೆಂಬಲಿಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದು ಸುದ್ದಿಯಲ್ಲಿದ್ದರು.

Join Whatsapp
Exit mobile version