ರಾಜ್ಯ ಹೈಕೋರ್ಟ್ ಗೆ ನಾಲ್ವರು ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ

Prasthutha|

ಬೆಂಗಳೂರು : ರಾಜ್ಯ ಹೈಕೋರ್ಟ್ ಗೆ ನಾಲ್ವರು ನೂತನ ನ್ಯಾಯಮೂರ್ತಿಗಳನ್ನು ನೇಮಿಸಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಆದೇಶಿಸಿದ್ದಾರೆ.

- Advertisement -

ನ್ಯಾಯಮೂರ್ತಿಗಳಾದ ಸಿಂಗಾಪುರಂ ರಾಘವಾಚಾರ್ ಕೃಷ್ಣಕುಮಾರ್, ಅಶೋಕ್ ಸುಭಾಶ್ಚಂದ್ರ ಕಿಣಗಿ, ಸಚಿನ್ ಶಂಕರ್ ಮಗದುಮ್, ಸೂರಜ್ ಗೋವಿಂದರಾಜ್ ರಾಜ್ಯ ಹೈಕೋರ್ಟ್ ಗೆ ನೇಮಕವಾದ ನೂತನ ನ್ಯಾಯಮೂರ್ತಿಗಳಾಗಿದ್ದಾರೆ.

ನೂತನವಾಗಿ ನೇಮಕಗೊಂಡ ನ್ಯಾಯಮೂರ್ತಿಗಳು ಹೆಚ್ಚುವರಿ ನ್ಯಾಯಮೂರ್ತಿಗಳಾಗಿದ್ದು, ಖಾಯಂ ಆಗಿ ಕಾರ್ಯನಿರ್ವಹಿಸಲಿದ್ದಾರೆ.

Join Whatsapp