ರಾಜ್ಯದಲ್ಲಿ ಅಪರಾಧ ನಿಯಂತ್ರಣಕ್ಕೆ ಅತಿ ಹೆಚ್ಚಿನ ಅನುದಾನ ಬಿಡುಗಡೆ: ಆರಗ ಜ್ಞಾನೇಂದ್ರ

Prasthutha|

ಬೆಂಗಳೂರು: ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ, ಜನರ ಆಸ್ತಿ-ಪಾಸ್ತಿ, ಪ್ರಾಣ ಕಾಪಾಡುವ ಹೊಣೆ ಹೊತ್ತಿರುವ ಪೊಲೀಸ್ ಇಲಾಖೆಯ ಸಿಬ್ಬಂದಿಗಳಿಗೆ ಚೈತನ್ಯದಾಯಕ ವಾತಾವರಣ ಸೃಷ್ಟಿ ಮಾಡಿಕೊಡಲು ಸರಕಾರ ಶ್ರಮಿಸುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

- Advertisement -

ರಾಜಭವನದಲ್ಲಿ ಹಮ್ಮಿಕೊಂಡ ಅತ್ಯುತ್ತಮ ಸೇವೆಗೈದ ಸಿಬ್ಬಂದಿಗಳಿಗೆ ರಾಷ್ಟ್ರಪತಿಯವರ ಪದಕ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪುರಸ್ಕೃತರನ್ನು ಉದ್ದೇಶಿಸಿ ಮಾತನಾಡಿದ ಗೃಹ ಸಚಿವರು, ಕಳೆದ ನಾಲ್ಕೂವರೆ ವರ್ಷಗಳಲ್ಲಿ, ನಮ್ಮ ಸರಕಾರ ಪೊಲೀಸ್ ಇಲಾಖೆಯ ಬಲವರ್ಧನೆಗೆ ಅತ್ಯಂತ ಹೆಚ್ಚು ಅನುದಾನ ಬಿಡುಗಡೆ ಮಾಡಿದೆ. ಪ್ರಸಕ್ತ ವರ್ಷದಲ್ಲಿ ಸುಮಾರು 200 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಒಟ್ಟು 117 ಸುಸಜ್ಜಿತ ಪೊಲೀಸ್ ಠಾಣೆಗಳು ನಿರ್ಮಾಣ ವಾಗುತ್ತಿದೆ ಎಂದರು.

ರಾಷ್ಟ್ರದಲ್ಲಿಯೇ, ಕರ್ನಾಟಕ ಪೊಲೀಸ್ ವ್ಯವಸ್ಥೆ ದಕ್ಷತೆ ಹಾಗೂ ನಾಗರಿಕರ ಸೇವೆಗೆ ಅತ್ಯುನ್ನತ ಮನ್ನಣೆ ಹೊಂದಿದೆ ಎಂದು ಪ್ರಶಂಸಿದ ಸಚಿವರು ರಾಜ್ಯ ಪೊಲೀಸರಿಗೆ ಅತ್ಯುತ್ತಮ ವಸತಿ ಸೌಲಭ್ಯ, ಸೈಬರ್ ಕ್ರೈಂ ವಿಭಾಗ ಬಲ ಪಡಿಸುವುದು ಸೇರಿದಂತೆ, ಅಪರಾಧ ನಿಯಂತ್ರಣ ಕ್ಕಾಗಿ, ಹತ್ತು ಹಲವು ಉಪಕ್ರಮ ಗಳನ್ನೂ ಸರಕಾರ ಕೈಗೊಂಡಿದೆ ಎಂದು ಸಚಿವರು ತಿಳಿಸಿದರು.

- Advertisement -

ರಾಜ್ಯಪಾಲ   ಶ್ರೀ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Join Whatsapp