ಹಿಜಾಬ್ ಪ್ರಕರಣ: ‘ ಕಾಂಗ್ರೆಸ್ ವಿವಾದದ ಮೆದುಳು, ಎಸ್‌ಡಿಪಿಐ ಅದರ ದೇಹ’ – ನಳಿನ್ ಕುಮಾರ್ ಕಟೀಲ್

Prasthutha|

ಬೆಂಗಳೂರು : ರಾಜ್ಯದಲ್ಲಿ ತಲೆದೊರಿರುವಂತಹ ಹಿಜಾಬ್ ವಿವಾದವನ್ನು ವಿದ್ಯಾರ್ಥಿನಿಯರ ಮೂಲಕ ಆಡಿಸುತ್ತಿರುವ ಕೀಲಿಕೈ ಬೇರೆಯೇ ಇದೆ. ಕಾಂಗ್ರೆಸ್ ಇದರ ಮೆದುಳು- ಎಸ್‌ಡಿಪಿಐ ಅದರ ದೇಹ. ಇದು ಕೇವಲ ವಿವಾದವಲ್ಲ, ಮೂಲಭೂತವಾದವನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ವ್ಯವಸ್ಥಿತ ಸಂಚು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಆರೋಪ ಮಾಡಿದ್ದಾರೆ.

- Advertisement -

ಈ ಕುರಿತು ಟ್ವೀಟ್ ಮಾಡಿರುವ ಅವರು, ಹಿಜಾಬ್ ವಿವಾದವನ್ನು ವಿದ್ಯಾರ್ಥಿನಿಯರ ಮೂಲಕ ಆಡಿಸುತ್ತಿರುವ ಕೀಲಿಕೈ ಬೇರೆಯೇ ಇದ್ದು,ಇದು ಕೇವಲ ವಿವಾದವಲ್ಲ, ಮೂಲಭೂತವಾದವನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ವ್ಯವಸ್ಥಿತ ಸಂಚು ಎಂದು ಆರೋಪಿಸಿದ್ದಾರೆ.

ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಹಿಜಾಬ್ ವಿವಾದದ ವಿಚಾರಣೆಯನ್ನು ಫೆಭ್ರವರಿ 28 ರ ವರೆಗೆ ಮುಂದೂಡುವಂತೆ ವಿದ್ಯಾರ್ಥಿಗಳ ಪರ ವಕೀಲರು ಈಗ ನ್ಯಾಯಾಲಯದಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.

Join Whatsapp