ಹಿಜಾಬ್ ಪ್ರಕರಣ: ಕಾಂಗ್ರೆಸ್ ಮುಸ್ಲಿಂ ಶಾಸಕರೊಂದಿಗೆ ಸಚಿವ ನಾಗೇಶ್ ಊಟ, ಚರ್ಚೆ

Prasthutha|

ಬೆಂಗಳೂರು: ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಕಾಂಗ್ರೆಸ್ ಅಲ್ಪಸಂಖ್ಯಾತ ಶಾಸಕರೊಂದಿಗೆ ಮಾತುಕತೆ ನಡೆಸಿ ಊಟವನ್ನೂ ಮಾಡಿದ್ದಾರೆ.

- Advertisement -

ಸಚಿವ ಬಿ ಸಿ ನಾಗೇಶ್ ಅವರ  ಕಚೇರಿಯಲ್ಲಿ ಗುರುವಾರ ಕಾಂಗ್ರೆಸ್  ಅಲ್ಪಸಂಖ್ಯಾತ ನಾಯಕರಾದ ಎನ್ ಎ ಹ್ಯಾರೀಸ್, ಝಮೀರ್ ಅಹ್ಮದ್, ರಿಝ್ವಾನ್ ಅರ್ಷದ್, ಸಲೀಂ ಅಹ್ಮದ್, ಸಿಎಂ ಇಬ್ರಾಹಿಂ, ರಹೀಂಖಾನ್ ಅವರು ಹಿಜಾಬ್ ಸಂಬಂಧ ಚರ್ಚೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ನಾಗೇಶ್, ಕೆಲವು ಕಡೆ ಆಗಿರುವ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದ್ದೇವೆ, 9,10 ನೇ ತರಗತಿ ಆರಂಭವಾಗಿದೆ, ಕೋರ್ಟ್ ಆದೇಶವನ್ನು ಎಲ್ಲಾರೂ ಫಾಲೋ ಮಾಡಬೇಕು ಎಂದು ಚರ್ಚೆ ಮಾಡಿದ್ದೇವೆ ಎಂದು ಹೇಳಿದರು.

Join Whatsapp