ಹಿಜಾಬ್ – ಕೇಸರಿ ಶಾಲು ಸಂಘರ್ಷ । ಹೊಸಪೇಟೆ ಪೊಲೀಸರಿಂದ ಪರೇಡ್

Prasthutha|

ಹೊಸೆಪೇಟೆ: ಇತ್ತೀಚೆಗೆ ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಾಬ್ – ಕೇಸರಿ ಶಾಲು ಸಂಘರ್ಷದ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಕಾನೂನು ಸುವ್ಯವಸ್ಥೆಯ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಪೊಲೀಸರು ನಗರದಾದ್ಯಂತ ಶುಕ್ರವಾರ ಪರೇಡ್ ನಡೆಸಿದ್ದಾರೆ.

- Advertisement -

ಡಿವೈಎಸ್ಪಿ ವಿಶ್ವನಾಥ್ ರಾಮ್ ಕುಲಕರ್ಣಿ ನೇತೃತ್ವದಲ್ಲಿ ನಡೆದ ಪೊಲೀಸ್ ಪರೇಡ್ ಅನ್ನು ನಗರದ ಪ್ರಮುಖ ಹಾಗೂ ಸೂಕ್ಷ್ಮ ಪ್ರದೇಶದಲ್ಲಿ ನಡೆಸಲಾಯಿತು.

ಹಿಜಾಬ್ ವಿಚಾರಕ್ಕೆ ಸಂಬಂಧಿಸಿದ ಅರ್ಜಿಯು ಹೈಕೋರ್ಟ್ ನಡೆಯುತ್ತಿದ್ದು, ನಿನ್ನೆ ವಾದ ಆಲಿಸಿದ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳು ಮಧ್ಯಂತರ ಆದೇಶ ನೀಡಲು ನಿರಾಕರಿಸಿ, ಮುಂದಿನ ವಿಚಾರಣೆಯನ್ನು ಫೆಬ್ರವರಿ 14 ಕ್ಕೆ ಮುಂದೂಡಿದ್ದರು.

- Advertisement -

ಈ ಮಧ್ಯೆ ಹೈಕೋರ್ಟ್ ನ ಮೌಖಿಕ ಆದೇಶವನ್ನು ಪ್ರಶ್ನಿಸಿ ವಿದ್ಯಾರ್ಥಿಗಳು ಸುಪ್ರೀಮ್ ಕೋರ್ಟ್ ಮೆಟ್ಟಿಲೇರಿದ್ದಾರೆ.



Join Whatsapp