Home ಟಾಪ್ ಸುದ್ದಿಗಳು ಹಿಜಾಬ್ – ಕೇಸರಿ ಶಾಲು ಸಂಘರ್ಷ । ಹೊಸಪೇಟೆ ಪೊಲೀಸರಿಂದ ಪರೇಡ್

ಹಿಜಾಬ್ – ಕೇಸರಿ ಶಾಲು ಸಂಘರ್ಷ । ಹೊಸಪೇಟೆ ಪೊಲೀಸರಿಂದ ಪರೇಡ್

ಹೊಸೆಪೇಟೆ: ಇತ್ತೀಚೆಗೆ ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಾಬ್ – ಕೇಸರಿ ಶಾಲು ಸಂಘರ್ಷದ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಕಾನೂನು ಸುವ್ಯವಸ್ಥೆಯ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಪೊಲೀಸರು ನಗರದಾದ್ಯಂತ ಶುಕ್ರವಾರ ಪರೇಡ್ ನಡೆಸಿದ್ದಾರೆ.

ಡಿವೈಎಸ್ಪಿ ವಿಶ್ವನಾಥ್ ರಾಮ್ ಕುಲಕರ್ಣಿ ನೇತೃತ್ವದಲ್ಲಿ ನಡೆದ ಪೊಲೀಸ್ ಪರೇಡ್ ಅನ್ನು ನಗರದ ಪ್ರಮುಖ ಹಾಗೂ ಸೂಕ್ಷ್ಮ ಪ್ರದೇಶದಲ್ಲಿ ನಡೆಸಲಾಯಿತು.

ಹಿಜಾಬ್ ವಿಚಾರಕ್ಕೆ ಸಂಬಂಧಿಸಿದ ಅರ್ಜಿಯು ಹೈಕೋರ್ಟ್ ನಡೆಯುತ್ತಿದ್ದು, ನಿನ್ನೆ ವಾದ ಆಲಿಸಿದ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳು ಮಧ್ಯಂತರ ಆದೇಶ ನೀಡಲು ನಿರಾಕರಿಸಿ, ಮುಂದಿನ ವಿಚಾರಣೆಯನ್ನು ಫೆಬ್ರವರಿ 14 ಕ್ಕೆ ಮುಂದೂಡಿದ್ದರು.

ಈ ಮಧ್ಯೆ ಹೈಕೋರ್ಟ್ ನ ಮೌಖಿಕ ಆದೇಶವನ್ನು ಪ್ರಶ್ನಿಸಿ ವಿದ್ಯಾರ್ಥಿಗಳು ಸುಪ್ರೀಮ್ ಕೋರ್ಟ್ ಮೆಟ್ಟಿಲೇರಿದ್ದಾರೆ.

Join Whatsapp
Exit mobile version