ಬೆಂಗಳೂರಿಗೂ ವ್ಯಾಪಿಸಿದ ಹಿಜಾಬ್ ವಿರೋಧಿ ಮನಸ್ಥಿತಿ : ಹಿಜಾಬ್ ಧರಿಸಿ ಬಂದಿದ್ದಕ್ಕೆ ಶಿಕ್ಷಕರಿಂದ ಅವಾಚ್ಯ ನಿಂದನೆ ಆರೋಪ: ಕಿರಿಕ್ ಶಿಕ್ಷಕಿ ಅಮಾನತು

Prasthutha|

ಬೆಂಗಳೂರು: ಹಿಜಾಬ್ ಸಂಘರ್ಷ ರಾಜಧಾನಿ ಬೆಂಗಳೂರಿಗೂ ವ್ಯಾಪಿಸಿದೆ.  ಚಂದ್ರಾಲೇಔಟ್ ನ ವಿದ್ಯಾ ಸಾಗರ್ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿಯರಿಗೆ  ಹಿಜಾಬ್ ನೆಪದಲ್ಲಿ ಶಿಕ್ಷಕರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿನಿಯರ ಪೋಷಕರು ಶಾಲೆ ಬಳಿ ಜಮಾಯಿಸಿದ್ದರು.

- Advertisement -

ಹಿಜಾಬ್ ಧರಿಸಿ ಬಂದ ಮಕ್ಕಳಿಗೆ ಹಿಜಾಬ್ ತೆಗೆಯುವಂತೆ ಶಿಕ್ಷಕರು ಒತ್ತಡ ಹಾಕಿದ್ದಾರೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಶಾಲೆಯಲ್ಲಿ ಶಿಕ್ಷಕರು ಹಾಗೂ ಪೋಷಕರ ನಡುವೆ ಮಾತಿನ ಚಕಮಕಿ ಕೂಡ ನಡೆದಿದೆ. ಶಾಲೆಯ ಮುಂದೆ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.

ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಲು ಹರಸಾಹಸಪಟ್ಟರು. ಸ್ಥಳದಲ್ಲಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

- Advertisement -

ವಿದ್ಯಾರ್ಥಿನಿಯರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಲ್ಲಿ ಶಿಕ್ಷಕಿ ಶಶಿಕಲಾ ಎಂಬವರನ್ನು ಅಮಾನತುಗೊಳಿಸಿ ಶಾಲಾ ಆಡಳಿತ ಮಂಡಳಿ ಕ್ರಮಕೈಗೊಂಡಿದೆ.



Join Whatsapp