Home ಟಾಪ್ ಸುದ್ದಿಗಳು ಹಿಜಾಬ್ : ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ಪ್ರಶ್ನಿಸಿ ಸುಪ್ರೀಂ ಕದ ತಟ್ಟಿದ ಕುಂದಾಪುರ ವಿದ್ಯಾರ್ಥಿನಿಯರು

ಹಿಜಾಬ್ : ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ಪ್ರಶ್ನಿಸಿ ಸುಪ್ರೀಂ ಕದ ತಟ್ಟಿದ ಕುಂದಾಪುರ ವಿದ್ಯಾರ್ಥಿನಿಯರು

ಬೆಂಗಳೂರು: ಧಾರ್ಮಿಕ ಗುರುತುಗಳನ್ನು ಹಾಕಿ ಕಾಲೇಜುಗಳಿಗೆ ಹೋಗಬೇಡಿಯೆಂದಿದ್ದ ಕರ್ನಾಟಕ ಹೈಕೋರ್ಟ್ ತ್ರಿಸದಸ್ಯ ಪೀಠದ ಮಧ್ಯಂತರ ಮೌಖಿಕ ಆದೇಶವನ್ನು ಪ್ರಶ್ನಿಸಿ ಉಡುಪಿ ಕಾಲೇಜಿನ ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ನಿನ್ನೆಯಷ್ಟೇ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಧಾರ್ಮಿಕ ಗುರುತು ಧರಿಸಿ ಹೋಗದಂತೆ ಮೌಖಿಕ ಸೂಚನೆಯನ್ನು ನೀಡಿತ್ತು. ಈ ಹಿನ್ನೆಲೆಯಲ್ಲಿ  ಹಿಜಾಬ್ ಪರ ಅರ್ಜಿದಾರರು ತುರ್ತು ವಿಚಾರಣೆ ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಶಿಫಾ ಸೇರಿ ಇತರೆ ವಿದ್ಯಾರ್ಥಿಗಳಿಂದ ಸುಪ್ರೀಂಗೆ ಇವತ್ತೇ ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಅರ್ಜಿ ಸಲ್ಲಿಸಿದ್ದಾರೆ.

ಹಿಜಾಬ್ ನಿಷೇಧದ ಕುರಿತು ವಿಚಾರಣೆ ಕೈಗೆತ್ತಿಕೊಳ್ಳಿ ಎಂದಿದ್ದ ಹಿರಿಯ ವಕೀಲ ಕಪಿಲ್ ಸಿಬಲ್  ವಾದಕ್ಕೆ ಸುಪ್ರೀಂ ಕೋರ್ಟ್, ಕರ್ನಾಟಕ ಹೈಕೋರ್ಟ್ ಆದೇಶ ಕಾಯೋಣ ಎಂದು ಹೇಳಿತ್ತು. ಆದರೆ ಸುಪ್ರೀಂ CJI  ಹೈಕೋರ್ಟ್ ವಿಚಾರಣೆ ವೇಳೆ ಮಧ್ಯ ಪ್ರವೇಶ ಮಾಡಲ್ಲ ಎಂದಿತ್ತು.  ಹೈಕೋರ್ಟ್ ವಿಚಾರಣೆ ಬಾಕಿ ಇರುವಾಗಲೇ ಅರ್ಜಿದಾರರು ಸುಪ್ರೀಂ ಕದ ತಟ್ಟಿದ್ದಾರೆ

Join Whatsapp
Exit mobile version