ಹಿಜಾಬ್ ನಿಷೇಧ: ಹೈಕೋರ್ಟ್ ತ್ರಿ ಸದಸ್ಯ ಪೀಠದಿಂದ ವಿಚಾರಣೆ ಆರಂಭ

Prasthutha|

ಬೆಂಗಳೂರು: ಮುಸ್ಲಿಮ್ ವಿದ್ಯಾರ್ಥಿನಿಯರು ಧರಿಸುತ್ತಿದ್ದ ಹಿಜಾಬ್ ಮೇಲೆ ನಿಷೇಧ ಹೇರಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ತ್ರಿಸದಸ್ಯ ಪೀಠವು ಆರಂಭಿಸಿದೆ.

- Advertisement -

ಅರ್ಜಿದಾರರ ಪರ ಹಿರಿಯ ವಕೀಲ ಸಂಜಯ್ ಹೆಗಡೆ ವಾದ ಮಂಡಿಸಿ, ಕಳೆದ ವರ್ಷದ ಸೆಪ್ಟೆಂಬರ್ನಿಂದ ಅರ್ಜಿದಾರರು ತಾರತಮ್ಯ ಅನುಭವಿಸುತ್ತಿದ್ದಾರೆ. ಅವರಿಗೆ ಹಾಜರಾತಿ ನೀಡದೇ ತರಗತಿಯಿಂದ ಹೊರಗೆ ಕೂರುವಂತೆ ಮಾಡಲಾಗಿದೆ. ಸಮಯಕ್ಕೆ ಸರಿಯಾಗಿ ಈ ಸಣ್ಣ ಪ್ರಕರಣವನ್ನು ನಿಯಂತ್ರಿಸುವ ಬದಲು ಅದನ್ನು ನಿಯಂತ್ರಣ ತಪ್ಪಲು ಬಿಡಲಾಗಿದೆ ಎಂದು ಹೇಳಿದರು.

Join Whatsapp
Exit mobile version