ಮನಾಲಿಯಲ್ಲಿ ಭಾರೀ ಹಿಮಪಾತ | 500ಕ್ಕೂ ಹೆಚ್ಚು ಪ್ರವಾಸಿಗರು ಅಪಾಯದಲ್ಲಿ

Prasthutha|

ನವದೆಹಲಿ : ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯ ಮನಾಲಿಯಲ್ಲಿ ಭಾರಿ ಹಿಮಪಾತದ ಹಿನ್ನೆಲೆಯಲ್ಲಿ 500ಕ್ಕೂ ಹೆಚ್ಚು ಪ್ರವಾಸಿಗರು ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ತೀವ್ರಗತಿಯಲ್ಲಿ ಸಾಗಿದೆ ಎಂದು ವರದಿಯೊಂದು ತಿಳಿಸಿದೆ.

- Advertisement -

ಅಟಲ್ ಸುರಂಗ ಮತ್ತು ಸೊಲಾಂಗ್ ನಡುವಿನ ರಸ್ತೆಯಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಸಮಸ್ಯೆ ಉದ್ಭವವಾಗಿದೆ. ರಕ್ಷಣಾ ಕಾರ್ಯ ಆರಂಭವಾಗಿದ್ದು, ಆದಷ್ಟು ಬೇಗೆ ವಾಹನ ಸಂಚಾರ ಪುನಃಸ್ಥಾಪಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಮನಾಲಿ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್ ಡಿಎಂ) ರಾಮನ್ ಘರ್ ಸಂಗಿ ತಿಳಿಸಿದ್ದಾರೆ.

ಈ ನಡುವೆ ಹಿಮಾಚಲ ಪ್ರದೇಶದಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಭಾರೀ ಹಿಮಪಾತದ ಸಾಧ್ಯತೆಯಿದೆ ಎನ್ನಲಾಗಿದೆ. ಜ.3ರಿಂದ ಜ.5ರ ವರೆಗೆ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ವರದಿ ತಿಳಿಸಿದೆ.

Join Whatsapp