ಹಿಂದೂ ಎನ್ನುವುದು ಭಾರತೀಯ ಪದವಲ್ಲ ಹೇಳಿಕೆ: ಸತೀಶ್ ಜಾರಕಿಹೊಳಿ ವಿರುದ್ಧ ಖಾಸಗಿ ದೂರು ದಾಖಲು

Prasthutha|

ಬೆಂಗಳೂರು: “ಹಿಂದೂ ಎನ್ನುವುದು ಭಾರತೀಯ ಪದವಲ್ಲ. ಅದು ಪರ್ಷಿಯನ್ ನೆಲಕ್ಕೆ ಸೇರಿದ್ದು, ಅದೊಂದು ಅಶ್ಲೀಲ ಪದವಾಗಿದೆ” ಎಂದು ಹೇಳಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿರುದ್ಧ ಬೆಂಗಳೂರಿನ ಎಂಟನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿದೆ.

- Advertisement -

ವಕೀಲ ದಿಲೀಪ್ ಕುಮಾರ್ ಎಂಬವರು ಖಾಸಗಿ ಪ್ರಕರಣ ದಾಖಲಿಸಿದ್ದು, ವಿಚಾರಣೆಯನ್ನು ನವೆಂಬರ್ 18ಕ್ಕೆ ಮುಂದೂಡಲಾಗಿದೆ. ಐಪಿಸಿ ಸೆಕ್ಷನ್ಗಳಾದ 153 ಮತ್ತು 500ರ ಅಡಿ ಕ್ರಮಕ್ಕೆ ಕೋರಲಾಗಿದೆ. ಅರ್ಜಿದಾರರನ್ನು ವಕೀಲ ಧರ್ಮಪಾಲ್ ಪ್ರತಿನಿಧಿಸಿದ್ದಾರೆ.



Join Whatsapp