Home ಟಾಪ್ ಸುದ್ದಿಗಳು ಹಿಂದೂ ಎನ್ನುವುದು ಭಾರತೀಯ ಪದವಲ್ಲ ಹೇಳಿಕೆ: ಸತೀಶ್ ಜಾರಕಿಹೊಳಿ ವಿರುದ್ಧ ಖಾಸಗಿ ದೂರು ದಾಖಲು

ಹಿಂದೂ ಎನ್ನುವುದು ಭಾರತೀಯ ಪದವಲ್ಲ ಹೇಳಿಕೆ: ಸತೀಶ್ ಜಾರಕಿಹೊಳಿ ವಿರುದ್ಧ ಖಾಸಗಿ ದೂರು ದಾಖಲು

ಬೆಂಗಳೂರು: “ಹಿಂದೂ ಎನ್ನುವುದು ಭಾರತೀಯ ಪದವಲ್ಲ. ಅದು ಪರ್ಷಿಯನ್ ನೆಲಕ್ಕೆ ಸೇರಿದ್ದು, ಅದೊಂದು ಅಶ್ಲೀಲ ಪದವಾಗಿದೆ” ಎಂದು ಹೇಳಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿರುದ್ಧ ಬೆಂಗಳೂರಿನ ಎಂಟನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿದೆ.

ವಕೀಲ ದಿಲೀಪ್ ಕುಮಾರ್ ಎಂಬವರು ಖಾಸಗಿ ಪ್ರಕರಣ ದಾಖಲಿಸಿದ್ದು, ವಿಚಾರಣೆಯನ್ನು ನವೆಂಬರ್ 18ಕ್ಕೆ ಮುಂದೂಡಲಾಗಿದೆ. ಐಪಿಸಿ ಸೆಕ್ಷನ್ಗಳಾದ 153 ಮತ್ತು 500ರ ಅಡಿ ಕ್ರಮಕ್ಕೆ ಕೋರಲಾಗಿದೆ. ಅರ್ಜಿದಾರರನ್ನು ವಕೀಲ ಧರ್ಮಪಾಲ್ ಪ್ರತಿನಿಧಿಸಿದ್ದಾರೆ.

Join Whatsapp
Exit mobile version