ಮುಖ್ಯಮಂತ್ರಿಗೆ ಬೆದರಿಕೆ ಹಾಕಿದ ಪ್ರಕರಣ | ಹಿಂದೂ ಮಹಾಸಭಾ ಮುಖಂಡರಿಗೆ ಜಾಮೀನು

Prasthutha|

► ಗಾಂಧಿಯನ್ನೇ ಬಿಟ್ಟಿಲ್ಲ , ನಿಮ್ಮನ್ನು ಬಿಡ್ತೀವಾ ಎಂದಿದ್ದ ಮುಖಂಡರು !

- Advertisement -

ಮಂಗಳೂರು: ಮೈಸೂರು ದೇವಸ್ಥಾನ ಧ್ವಂಸ ಮಾಡಿದ ಪ್ರಕರಣಕ್ಕೆ ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಬಹಿರಂಗವಾಗಿ ಕೊಲೆ ಬೆದರಿಕೆ ಒಡ್ಡಿ ಬಂಧನಕ್ಕೊಳಗಾಗಿದ್ದ ಹಿಂದೂ ಮಹಾಸಭಾ ಮುಖಂಡರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಕಳೆದ ಶನಿವಾರ ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ್ದ ಅಖಿಲ ಭಾರತ ಹಿಂದೂ ಮಹಾಸಭಾ ಮುಖಂಡರು ಗಾಂಧೀಜಿಯನ್ನೇ ನಾವು ಬಿಟ್ಟಿಲ್ಲ , ಇನ್ನು ನಿಮ್ಮನ್ನು ಬಿಡ್ತೀವಾ ಎಂದು ಮುಖ್ಯಮಂತ್ರಿಗೆ ಬೆದರಿಕೆ ಒಡ್ಡಿದ್ದರು. ಅಲ್ಲದೇ ಈ ಹೇಳಿಕೆ ಸಾರ್ವಜನಿಕ ಆಕ್ರೋಶಕ್ಕೂ ಕಾರಣವಾಗಿತ್ತು.

- Advertisement -

ಹಾಗೂ ಪ್ರಕರಣಕ್ಕೆ ಸಂಬಂಧಿಸಿ ಹಿಂದೂ ಮಹಾಸಭಾ ರಾಜ್ಯಧ್ಯಕ್ಷ ರಾಜೇಶ್ ಪವಿತ್ರನ್ ರಾಜ್ಯ ಪ್ರ. ಕಾರ್ಯದರ್ಶಿ ಧರ್ಮೇಂದ್ರ, , ಪ್ರೇಮ್, ಸಂದೀಪ್ ಶೆಟ್ಟಿ ಸೇರಿ ಒಟ್ಟು ನಾಲ್ವರನ್ನು ಬಂಧಿಸಲಾಗಿತ್ತು. ಇದೀಗ ಮಂಗಳೂರಿನ ಎರಡನೇ ಜೆಎಂಎಫ್ ಸಿ ನ್ಯಾಯಾಲಯ ಈ ಎಲ್ಲಾ ಮುಖಂಡರಿಗೆ ಜಾಮೀನು ನೀಡಿದೆ.

Join Whatsapp