ಗುರ್ಗಾಂವ್ ನಲ್ಲಿ ಮತ್ತೆ ನಮಾಝ್ ಗೆ ಅಡ್ಡಿಪಡಿಸಿದ ಸಂಘಪರಿವಾರ

Prasthutha|

ನವದೆಹಲಿ: ಸಂಘಪರಿವಾರದ ಕಾರ್ಯಕರ್ತರು ಶುಕ್ರವಾರ ನಮಾಝ್ ಗೆ ಮತ್ತೆ ಅಡ್ಡಿಪಡಿಸಿದ ಘಟನೆ ಹರ್ಯಾಣದ ಗುರ್ಗಾಂವ್ ನಲ್ಲಿ ನಡೆದಿದೆ.

- Advertisement -

ಸ್ಥಳೀಯರು ಮತ್ತು ಸಂಘಪರಿವಾರದ ಕಾರ್ಯಕರ್ತರು ಶುಕ್ರವಾರ ಮಧ್ಯಾಹ್ನ ಗುರ್ಗಾಂವ್ ನ 37 ಸೆಕ್ಟರ್ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಜಮಾವಣೆಗೊಂಡು ಮುಸ್ಲಿಮರು ನಮಾಝ್ ನಿರ್ವಹಿಸದಂತೆ ಪೊಲೀಸ್ ಇಲಾಖೆಗೆ ಒತ್ತಡ ಹೇರಿದರು. ಈ ವೇಳೆ ನೆರೆದ ಕಾರ್ಯಕರ್ತರು ಜೈ ಶ್ರೀರಾಮ್ ಮತ್ತು ಭಾರತ್ ಮಾತಾ ಕಿ ಜೈ ಘೋಷಣೆಗಳನ್ನು ಕೂಗಿದರು.

ಕಳೆದ ಶುಕ್ರವಾರ ಈ ಸ್ಥಳದಲ್ಲಿ ಮುಸ್ಲಿಮರು ನಮಾಝ್ ನಿರ್ವಹಿಸಿ ಗಮನ ಸೆಳೆದಿದ್ದರು. ಇದಕ್ಕೆ ಪ್ರತಿಯಾಗಿ ಈ ಶುಕ್ರವಾರ ಸ್ಥಳದಲ್ಲಿ ಜಮಾವಣೆಗೊಂಡ ಸಂಘಪರಿವಾರದ ಕಾರ್ಯಕರ್ತರು ಘೋಷಣೆ ಕೂಗಿ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಿಸಿದ್ದಾರೆ.

- Advertisement -

ಈ ಕುರಿತು ಪ್ರತಿಕ್ರಿಯಿಸಿದ ಪ್ರತಿಭಟನಾಕಾರರು ನವೆಂಬರ್ 26 ರ ಮುಂಬೈ ಹುತಾತ್ಮರ ಸ್ಮರಣಾರ್ಥ ಕಾರ್ಯಕ್ರಮ ನಡೆಸಲು ಬಂದಿರುವುದಾಗಿ ತಿಳಿಸಿದರು.

Join Whatsapp