Home ಕರಾವಳಿ ಬ್ಯಾರಿಗಳ ಓಟು ಬೇಡ ಹಿಂದೂಗಳ ಓಟು ಸಾಕು: ಶಾಸಕ ಹರೀಶ್ ಪೂಂಜಾ

ಬ್ಯಾರಿಗಳ ಓಟು ಬೇಡ ಹಿಂದೂಗಳ ಓಟು ಸಾಕು: ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ: ನನಗೆ ಬ್ಯಾರಿಗಳ ಓಟು ಬೇಡ ಹಿಂದೂಗಳ ಓಟು ಸಾಕು ಎಂದು ಶಾಸಕ ಹರೀಶ್ ಪೂಂಜಾ ಕಾರ್ಯಕ್ರಮ ಒಂದರಲ್ಲಿ ಹೇಳಿಕೆ ನೀಡಿದ್ದಾರೆ.

ವೇದಿಕೆಯೊಂದರಲ್ಲಿ ಭಾಷಣದ ವೇಳೆ ಮಾತನಾಡಿದ ಶಾಸಕ ಪೂಂಜಾ ಮುಂದಿನ ಚುನಾವಣೆಗೆ ಸಂಘದ ಹಿರಿಯರು ನನ್ನನ್ನು ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸಲು ಸೂಚಿಸಿದ್ರೆ ನಾನು ಧೈರ್ಯದಿಂದ ಹೇಳುತ್ತೇನೆ, ನನಗೆ ಬ್ಯಾರಿಗಳ ಓಟು ಬೇಡ ಹಿಂದೂ ಗಳ ಓಟು ಮಾತ್ರ ಸಾಕು ಯಾಕೆಂದರೆ ಅಯೋಧ್ಯೆಯಲ್ಲಿ ಅಯೋಧ್ಯೆ ರಾಮಮಂದಿರ ನಿರ್ಮಾಣ ಆಗಬೇಕು, ಕಾಶಿಯಲ್ಲಿ ಕಾಶಿ ವಿಶ್ವನಾಥ ದೇವರ ಮಂದಿರ ಆಗಬೇಕು, ದತ್ತಪೀಠದಲ್ಲಿ ದತ್ತಾತ್ರೇಯನ ಮಂದಿರ ನಿರ್ಮಾಣ ಆಗಬೇಕು ಎಂದು ಹೇಳಿಕೆ ಕೊಟ್ಟಿದ್ದಾರೆ.

ಪ್ರಜಾಪ್ರಭುತ್ವ ದೇಶದಲ್ಲಿ ಎಲ್ಲರಿಂದ ಮತ ಪಡೆದು ಶಾಸಕರಾಗಿ ಆಯ್ಕೆಯಾದ ಜನ ಪ್ರತಿನಿಧಿಯೊಬ್ಬರ ಈ ಹೇಳಿಕೆ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

Join Whatsapp
Exit mobile version