ಗಣೇಶೋತ್ಸವ ಮೆರವಣಿಗೆಯಲ್ಲಿ ಹಿಂದೂ ಯುವಕನ ಕೊಲೆ

Prasthutha|

ಗದಗ: ಗಣೇಶೋತ್ಸವ ಮೆರವಣಿಗೆಯ ಸಂದರ್ಭದಲ್ಲಿ ಯುವಕನೊಬ್ಬನಿಗೆ ಚೂರಿ ಇರಿದು ಕೊಲೆ ಮಾಡಿರುವ ದಾರುಣ ಘಟನೆ ಜಿಲ್ಲೆಯ ತೋಟಂದಾರರ್ಯ ಮಠದ ಬಳಿ ನಿನ್ನೆ ತಡರಾತ್ರಿ ನಡೆದಿದೆ.

- Advertisement -


ಕೊಲೆಯಾದ ಯುವಕನನ್ನು ಸುದೀಪ್ ಮುಡೆವಾಡಿ(22) ಎಂದು ಗುರುತಿಸಲಾಗಿದೆ.

ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಸುದೀಪ್ ಸ್ನೇಹಿತರೇ ಚಾಕುವಿನಲ್ಲಿ ಇರಿದು ಕೊಲೆ ಮಾಡಿದ್ದು, ರಕ್ತದ ಮಡುವಿನಲ್ಲೇ ಬಿದ್ದು ಸುದೀಪ್ ಸಾವನ್ನಪ್ಪಿದ್ದಾನೆ.

- Advertisement -

ಶಹರಾ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದು, ಕೊಲೆಗೆ ಕಾರಣ ತಿಳಿದು ಬಂದಿಲ್ಲ ಎನ್ನಲಾಗಿದೆ.



Join Whatsapp