Home ಕರಾವಳಿ ಹಿಂದೂಗಳು ಶಸ್ತ್ರಾಸ್ತ್ರಗಳನ್ನು ಬಳಸಲು ಕಲಿಯಬೇಕು: ಹಿಂಜಾವೇ ಮುಖಂಡನಿಂದ ವಿವಾದಾತ್ಮಕ ಹೇಳಿಕೆ

ಹಿಂದೂಗಳು ಶಸ್ತ್ರಾಸ್ತ್ರಗಳನ್ನು ಬಳಸಲು ಕಲಿಯಬೇಕು: ಹಿಂಜಾವೇ ಮುಖಂಡನಿಂದ ವಿವಾದಾತ್ಮಕ ಹೇಳಿಕೆ

ಉಡುಪಿ: ಪ್ರತಿ ಹಿಂದೂವಿನ ಮನೆಯಲ್ಲೂ ಹಳೆಯ ಸೈಕಲ್, ಕುಕ್ಕರ್, ಮಿಕ್ಸರ್ ಗ್ರೈಂಡರ್ ಬದಲು ಶಸ್ತ್ರಾಸ್ತ್ರಗಳನ್ನು ಇಟ್ಟುಕೊಂಡು ಆಯುಧಪೂಜೆ ಮಾಡಬೇಕು ಎಂದು ಹಿಂದೂ ಜಾಗರಣಾ ವೇದಿಕೆ ಮುಖಂಡ ಶ್ರೀಕಾಂತ್ ಕಾರ್ಕಳ ಎಂಬಾತ ನಾಲಗೆ ಹರಿಯಬಿಟ್ಟಿದ್ದಾನೆ.

ನಿನ್ನೆ ಉಡುಪಿಯಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀಕಾಂತ್, ಇನ್ನು ಮುಂದೆ ಪ್ರತಿ ಹಿಂದೂಗಳು ಶಸ್ತ್ರಾಸ್ತ್ರಗಳನ್ನು ಬಳಸಲು ಕಲಿಯಬೇಕು. ಕನಿಷ್ಠ ಪಕ್ಷ ತಮ್ಮ ತಮ್ಮ ಮನೆಗಳಲ್ಲಿ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಳ್ಳುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಹಿಜಾಬ್ ವಿವಾದವನ್ನು ತಡೆಗಟ್ಟಲು ಹಿಂದೂ ಜಾಗರಣಾ ವೇದಿಕೆ ಈ ಹಿಂದೆ ಕಾರ್ಯಯೋಜನೆ ರೂಪಿಸಿದ್ದು, ಭವಿಷ್ಯದಲ್ಲಿ ಇಂತಹ ವಿವಾದವನ್ನು ಸೃಷ್ಟಿಸಲು ಯತ್ನಿಸುತ್ತಿರುವ ವಿರುದ್ಧ ಕತ್ತಿಗಳನ್ನು ಪ್ರಯೋಗಿಸಬೇಕಾಗಬಹುದು ಎಂದು ಪ್ರಚೋದನಾಕಾರಿಯಾಗಿ ಮಾತನಾಡಿದ್ದು, ಈತನ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Join Whatsapp
Exit mobile version