Home ಟಾಪ್ ಸುದ್ದಿಗಳು ಹಿಂದೂಗಳು ಹೆಚ್ಚು ಮಕ್ಕಳಿಗೆ ಜನ್ಮ ನೀಡಬೇಕು ಎಂದ ಯತಿ ನರಸಿಂಗಾನಂದ ಸರಸ್ವತಿ

ಹಿಂದೂಗಳು ಹೆಚ್ಚು ಮಕ್ಕಳಿಗೆ ಜನ್ಮ ನೀಡಬೇಕು ಎಂದ ಯತಿ ನರಸಿಂಗಾನಂದ ಸರಸ್ವತಿ

ಶಿಮ್ಲಾ: ಸದಾ ವಿವಾದದ ಮಾತುಗಳಿಂದಲೇ ಪ್ರಸಿದ್ಧಿ ಪಡೆದಿರುವ ಯತಿ ನರಸಿಂಗಾನಂದ ಮತ್ತೆ ಪ್ರಚೋದಿಸುವ ಮಾತುಗಳಿಂದ ಸುದ್ದಿಯಾಗಿದ್ದಾರೆ. ಭಾರತವು ಇಸ್ಲಾಮಿಕ್ ರಾಷ್ಟ್ರವಾಗುವುದನ್ನು ತಪ್ಪಿಸಲು ಹಿಂದೂಗಳು ಹೆಚ್ಚು ಮಕ್ಕಳಿಗೆ ಜನ್ಮನೀಡುವಂತೆ ಯತಿ ನರಸಿಂಗಾನಂದ ಕರೆ ನೀಡಿದ್ದಾರೆ.


ಹಿಂದೂಗಳು ಬಹುಸಂಖ್ಯಾತರಾಗಿರುವುದರಿಂದ ಭಾರತವು ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ ಎಂದಿರುವ ನರಸಿಂಗಾನಂದ, ಭಾರತವು ಇಸ್ಲಾಮಿಕ್ ರಾಷ್ಟ್ರವಾಗುವುದನ್ನು ತಪ್ಪಿಸಲು ಹೆಚ್ಚಿನ ಮಕ್ಕಳಿಗೆ ಜನ್ಮ ನೀಡುವಂತೆ ನಮ್ಮ ಸಂಘಟನೆಯು ಹಿಂದೂಗಳಿಗೆ ಮನವಿ ಮಾಡುತ್ತದೆ’ ಎಂದು ಹೇಳಿದ್ದಾರೆ.


ನೆರೆಯ ಪಾಕಿಸ್ತಾನದಂತೆ ಭಾರತದಲ್ಲೂ ಮುಸ್ಲಿಮರು ಬಹುಸಂಖ್ಯಾತರಾದರೆ ಇಸ್ಲಾಮಿಕ್ ದೇಶವಾಗುತ್ತದೆ. ಆದ್ದರಿಂದಲೇ ಭಾರತವು ಇಸ್ಲಾಮಿಕ್ ರಾಷ್ಟ್ರವಾಗುವುದನ್ನು ತಪ್ಪಿಸಲು ಹಿಂದೂಗಳು ಹೆಚ್ಚಿನ ಮಕ್ಕಳಿಗೆ ಜನ್ಮ ನೀಡಬೇಕೆಂದು ನಮ್ಮ ಸಂಘಟನೆ ಕೇಳಿಕೊಂಡಿದೆ. ನಮ್ಮ ದೇಶದ ಕಾನೂನಿನಲ್ಲಿ ನಾಗರಿಕರು ಕೇವಲ ಎರಡು ಮಕ್ಕಳಿಗೆ ಮಾತ್ರ ಜನ್ಮ ನೀಡಬೇಕೆಂದು ಎನ್ನುವುದಿಲ್ಲ ಎಂದೂ ಹೇಳಿದ್ದಾರೆ.

ಕಳೆದ ಡಿಸೆಂಬರ್ ನಲ್ಲಿ ಹರಿದ್ವಾರದಲ್ಲಿ ಆಯೋಜಿಸಲಾಗಿದ್ದ ಧರ್ಮ ಸಂಸತ್ ನಲ್ಲಿ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದ ಯತಿ ನರಸಿಂಗಾನಂದನನ್ನು ಬಂಧಿಸಲಾಗಿತ್ತು, ಆ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಇದೀಗ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿ ಪ್ರಚೋದಿಸಿದ್ದಾರೆ.

Join Whatsapp
Exit mobile version