Home ಟಾಪ್ ಸುದ್ದಿಗಳು ಹಿಂದೂಗಳು ಮನೆಯಲ್ಲಿ ತಲ್ವಾರ್ ಇಡಬೇಕು, ಅದು ಅಪರಾಧವಲ್ಲ: ಪ್ರಮೋದ್ ಮುತಾಲಿಕ್

ಹಿಂದೂಗಳು ಮನೆಯಲ್ಲಿ ತಲ್ವಾರ್ ಇಡಬೇಕು, ಅದು ಅಪರಾಧವಲ್ಲ: ಪ್ರಮೋದ್ ಮುತಾಲಿಕ್

ಕಲಬುರಗಿ: ಹಿಂದೂಗಳು ತಮ್ಮ ಮನೆಯಲ್ಲಿ ಎಲ್ಲರಿಗೂ ಕಾಣುವ ರೀತಿಯಲ್ಲೇ ತಲ್ವಾರ್ ಇಡಬೇಕು ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರಚೋದನಕಾರಿ ಮಾತುಗಳನ್ನಾಡಿದ್ದಾರೆ.

ಕಲಬುರಗಿಯ ಯಡ್ರಾಮಿಯಲ್ಲಿ ನಿನ್ನೆ ನಡೆದ ಹಿಂದೂ ಸಂತ ಸಮಾವೇಶದಲ್ಲಿ ಮಾತನಾಡಿದ ಅವರು, ಮೊದಲು ನಾವೆಲ್ಲರೂ ಆಯುಧಗಳನ್ನು ಪೂಜೆ ಮಾಡುತ್ತಿದ್ದೆವು. ಇದೀಗ ಪುಸ್ತಕ, ಪೆನ್ನು, ವಾಹನಗಳನ್ನು ಪೂಜೆ ಮಾಡುತ್ತಿದ್ದೇವೆ. ಪೊಲೀಸರು, ಪೊಲೀಸ್ ಠಾಣೆಯಲ್ಲಿ ಎಫ್​ ಐಆರ್​ ಗೆ ಪೂಜೆ ಮಾಡಲ್ಲ. ಪೊಲೀಸ್ ಠಾಣೆಯಲ್ಲಿ ಪೊಲೀಸರು ಬಂದೂಕಿಗೆ ಪೂಜೆ ಮಾಡಲ್ವಾ? ಹೀಗಾಗಿ ಇನ್ನುಮುಂದೆ ತಲ್ವಾರ್, ಚಾಕು, ಕೊಡಲಿ ಇಟ್ಟು ಪೂಜೆ ಮಾಡಬೇಕು. ಮನೆಯಲ್ಲಿ ಒಂದು ತಲ್ವಾರ್​ ಇಡುವುದು ಅಪರಾಧವಲ್ಲ ಎಂದರು.

Join Whatsapp
Exit mobile version