ಬೆಂಗಳೂರಿನ ಚರ್ಚ್ ಮೇಲೆ ಸಂಘಪರಿವಾರ ದಾಳಿ: ಪ್ರಾರ್ಥನಾ ನಿರತರಿಗೆ ಗಂಭೀರ ಹಲ್ಲೆ

Prasthutha|

ಬೆಂಗಳೂರು: ನಗರದ ಮಲತ್ತ ಹಳ್ಳಿಯಲ್ಲಿರುವ ಹೆವನ್ಸ್ ಕಿಂಗ್ಡಮ್ ಮಿನಿಸ್ಟ್ರೀಸ್ ಚರ್ಚ್ ಮೇಲೆ ಸಂಘಪರಿವಾರದ ಕಾರ್ಯಕರ್ತರು ದಾಳಿ ನಡೆಸಿದರಲ್ಲದೆ ಪ್ರಾರ್ಥನಾ ನಿರತರರ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

- Advertisement -

ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಗ್ಗೆ 10.30 ಕ್ಕೆ ಸಂಘಪರಿವಾರದ ಕಾರ್ಯಕರ್ತರು ಪ್ರಾರ್ಥನಾ ನಿರತ ಮಹಿಳೆ, ಮಕ್ಕಳು ಸೇರಿದಂತೆ ನೆರೆದವರನ್ನು ಅವ್ಯಾಚ ಶಬ್ದಗಳಿಂದ ನಿಂದಿಸಿ ಗಂಭೀರವಾಗಿ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಕ್ರಿಸ್ಮಸ್ ಆಚರಣೆಯ ಹೊಸ್ತಿನಲ್ಲಿರುವ ಕ್ರಿಶ್ಚಿಯನ್ ಸಮುದಾಯದ ಮೇಲೆ ಸಂಘಪರಿವಾರ ಕಾರ್ಯಕರ್ತರು ದಾಳಿ ನಡೆಸಿರುವುದು ಖಂಡನೀಯ ಎಂದು ಪ್ರಾರ್ಥನಾ ನಿರತರು ತಿಳಿಸಿದ್ದಾರೆ.

- Advertisement -

ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

Join Whatsapp