ರಾಜ್ಯದಲ್ಲಿ ಮದ್ರಸಾ ನಿಷೇಧಿಸಲು ಶಿಕ್ಷಣ ಇಲಾಖೆಗೆ ಹಿಂದುತ್ವ ಸಂಘಟನೆಗಳ ಮನವಿ

Prasthutha|

ಬೆಂಗಳೂರು: ರಾಜ್ಯದಲ್ಲೂ ಮದ್ರಸಾ ನಿಷೇಧಿಸುವಂತೆ ವಿವಿಧ ಹಿಂದುತ್ವ ಸಂಘಟನೆಗಳು ಶಿಕ್ಷಣ ಇಲಾಖೆಗೆ ಮನವಿ ಮಾಡಿವೆ.

- Advertisement -


ಮದ್ರಸಾಗಳು ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿವೆ. ಹೀಗಾಗಿ ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ಸರ್ಕಾರ ನಿಷೇಧ ಮಾಡಿದಂತೆ ಕರ್ನಾಟಕದಲ್ಲೂ ಮದ್ರಸಾಗಳನ್ನು ನಿಷೇಧ ಮಾಡಿ ಅಲ್ಲಿ ಓದುತ್ತಿರುವ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತೆ ಮಾಡಬೇಕು ಎಂದು ಶಿಕ್ಷಣ ಇಲಾಖೆಗೆ ಮನವಿ ಮಾಡಲಾಗಿದೆ.


ಮದ್ರಸಾ ಶಿಕ್ಷಕರಿಗೆ ಯಾವುದೇ ಪಾಠ ಬೋಧನೆಗೆ ಅರ್ಹತೆ ಇರುವುದಿಲ್ಲ. ಮಕ್ಕಳಿಗೆ ಗಣಿತ ಇತಿಹಾಸ ಭಾಷೆಗಳ ಪರಿಚಯವೇ ಮದ್ರಸಾಗಳಲ್ಲಿ ಮಾಡುವುದಿಲ್ಲ. ಹೀಗಾಗಿ ಉಗ್ರ ಸಂಘಟನೆಗಳ ಜೊತೆ ಸಂಪರ್ಕ ಹೊಂದಿರುವ ಮದ್ರಸಾಗಳನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಹಿಂದೂಪರ ಸಂಘಟನೆಗಳು ಒತ್ತಾಯಿಸಿವೆ.

Join Whatsapp