ಮಂಗಳೂರು | ಹಿಂಜಾವೇ ಮುಖಂಡನಿಂದ ಇಸ್ಲಾಂ ಕುರಿತು ಅವಹೇಳನ: ಬಂಧಿಸುವಂತೆ ಆಗ್ರಹ

Prasthutha|

ಮಂಗಳೂರು: ಇಸ್ಲಾಮ್ ಮತ್ತು ಮುಸ್ಲಿಮರ ವಿರುದ್ಧ ಹಿಂದೂ ಜಾಗರಣಾ ವೇದಿಕೆ ಮುಖಂಡ ರಾಧಾಕೃಷ್ಣ ಅಡ್ಯಂತಾಯ ಅವಹೇಳನಕಾರಿ ಭಾಷಣ ಮಾಡಿದ್ದು, ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

- Advertisement -

ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಿನ್ನೆ ನಡೆದ ಹಿಂದೂ ಜಾಗೃತಿ ಸಭೆಯಲ್ಲಿ ಭಾಷಣ ಮಾಡಿರುವ ಅವರು, ಇಸ್ಲಾಂ ಎನ್ನುವಂತಹದ್ದು ಧರ್ಮವಲ್ಲ, ಮತವಲ್ಲ, ಸಂಸ್ಕೃತಿ ಅಲ್ಲ, ಸಭ್ಯತೆ ಅಲ್ಲ, ಸಂಸ್ಕಾರ ಅಲ್ಲ, ಮಾನವೀಯತೆ ಅಲ್ಲ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಈ ಕುರಿತ ವೀಡಿಯೋ ವೈರಲ್ ಆಗಿತ್ತು.

ರಾಧಾಕೃಷ್ಣ ಅಡ್ಯಂತಾಯ ಇಸ್ಲಾಂ ಧರ್ಮದ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೆ, ಪೊಲೀಸರು ಆತನ ಮೇಲೆ ಪ್ರಕರಣ ದಾಖಲಿಸಿ ತಕ್ಷಣ ಬಂಧಿಸುವಂತೆ ಹಲವು ಸಂಘ ಸಂಸ್ಥೆಗಳು ಆಗ್ರಹಿಸಿವೆ.

- Advertisement -

ಇತ್ತೀಚೆಗೆ ಪ್ರವಾದಿ ನಿಂದನೆ ಹೇಳಿಕೆ ನೀಡಿದ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ದೇಶ ವಿದೇಶದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದು, ದೇಶದ ಗೌರವಕ್ಕೆ ಧಕ್ಕೆ ತಂದದ್ದಕ್ಕಾಗಿ ಆಕೆಯನ್ನು ಬಿಜೆಪಿ ವಕ್ತಾರೆ ಸ್ಥಾನದಿಂದ ಕೆಳಗಿಳಿಸಬೇಕಾಗಿ ಬಂದಿದೆ.

Join Whatsapp