ಮಳೆ ಪರಿಸ್ಥಿತಿ ನಿರ್ವಹಿಸಲು ವಲಯಕ್ಕೊಬ್ಬ ಮೇಲ್ವಿಚಾರಕರ ನೇಮಕ: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

Prasthutha|

ಬೆಂಗಳೂರು: ಮಳೆ ಪರಿಸ್ಥಿತಿ ನಿಭಾಯಿಸಲು ರಾಜ್ಯ ವಿಪತ್ತು ನಿರ್ವಹಣಾ ದಳದಿಂದ (ಎಸ್ ಡಿಆರ್ ಎಫ್)  8 ವಲಯಗಳಿಗೂ ತಲಾ ಒಬ್ಬರು ಮೇಲ್ವಿಚಾರಕರನ್ನು ನಿಯೋಜಿಸಬೇಕು.ಮತ್ತು ಅವರು ಆಯಾ ವಲಯದ ಜಂಟಿ ಆಯುಕ್ತರೊಂದಿಗೆ ಸಮನ್ವಯ ಸಾಧಿಸಿ ಕಾರ್ಯ ನಿರ್ವಹಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಎಸ್ ಡಿಆರ್ ಎಫ್ ನ ಉಪ ನಿರ್ದೇಶಕರಿಗೆ ಸೂಚಿಸಿದ್ದಾರೆ.

- Advertisement -

ವಿಪತ್ತು ನಿರ್ವಹಣೆಗೆ ಸಂಬಂಧಿಸಿ ಮಂಗಳವಾರ ವರ್ಚುವಲ್ ಸಭೆ ನಡೆಸಿದ ಅವರು, ‘ ಆಯಾ ವಲಯ ಮಟ್ಟದಲ್ಲಿ ಸ್ವಯಂ ಸೇವಕ ತಂಡಗಳನ್ನು ಗುರುತಿಸಿ, ಸಕ್ರಿಯಗೊಳಿಸಬೇಕು. ಮಳೆಗಾಲದ ಸಂದರ್ಭದಲ್ಲಿ ಬಿಬಿಎಂಪಿ, ಬೆಸ್ಕಾಂ, ಜಲಮಂಡಳಿ ಹಾಗೂ ಎಸ್ ಡಿಆರ್ ಎಫ್ ಸಮನ್ವಯದಿಂದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು’ ಎಂದು ಆದೇಶಿಸಿದರು.

‘ನಮ್ಮಲ್ಲಿರುವ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ನಾಗರಿಕರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ತ್ವರಿತಗತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು.ಹಾಗೂ ಮಳೆಗಾಲದಲ್ಲಿ ಕಾರ್ಯ ನಿರ್ವಹಿಸುವ ಎಲ್ಲಾ ಇಲಾಖೆಗಳ ಸಿಬ್ಬಂದಿಯ ಹೆಸರು, ಮೊಬೈಲ್ ಸಂಖ್ಯೆಯ ಮಾಹಿತಿಯನ್ನು ಜನರಿಗೆ ಒದಗಿಸಬೇಕು” ಎಂದು ತಾಕೀತು ಮಾಡಿದರು.

- Advertisement -

‘ಪಾಲಿಕೆಯ ಅರಣ್ಯ ವಿಭಾಗದಿಂದ ಮರಗಳನ್ನು ತೆರವುಗೊಳಿಸಲು 21 ತಂಡಗಳು ಕಾರ್ಯ ನಿರ್ವಹಿಸುತ್ತಿದ್ದು, ಹಗಲಿನಲ್ಲಿ 18 ತಂಡಗಳು, ರಾತ್ರಿ ವೇಳೆ 3 ತಂಡಗಳು ಕಾರ್ಯನಿರ್ವಹಿಸುತ್ತಿವೆ. ಈ ಪೈಕಿ ರಾತ್ರಿ ವೇಳೆಯೂ ಹೆಚ್ಚಿನ ತಂಡಗಳು ಕಾರ್ಯ ನಿರ್ವಹಿಸಬೇಕು’ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಸೂಚನೆ ನೀಡಿದರು.

Join Whatsapp