ಹಿಟ್​ ಆ್ಯಂಡ್​​​ ರನ್​: ತಂದೆ-ಮಗ ಮೃತ್ಯು; ಓರ್ವ ಗಂಭೀರ

Prasthutha|

ಬೆಂಗಳೂರು: ನಗರದ ಸದಾಶಿವನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಎಂಎಸ್ ರಾಮಯ್ಯ ಬಳಿಯ ಇಸ್ರೋ ಸರ್ಕಲ್​​ನಲ್ಲಿ ಹಿಟ್ ಆ್ಯಂಡ್​​ ರನ್​ಗೆ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು, ಮತ್ತೊರ್ವನ ಸ್ಥಿತಿ ಗಂಭೀರವಾಗಿದೆ.

- Advertisement -

ಕುವೆಂಪು ನಗರದ ನಿವಾಸಿಗಳಾದ ರಘು ಮತ್ತು ಚಿರಂಜೀವಿ (ಅಪ್ಪ ಮತ್ತು ಮಗ) ಮೃತಪಟ್ಟವರು. ವಾಸು (ಅಳಿಯ) ಸ್ಥಿತಿ ಗಂಭೀರವಾಗಿದೆ.

ಒಂದೇ ಕುಟುಂಬದ ಮೂವರು ಪುಸ್ತಕದ ವ್ಯಾಪಾರ ಮಾಡುತ್ತಿದ್ದರು. ಇವರು ಕಳೆದ ರಾತ್ರಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಎಂಎಸ್ ರಾಮಯ್ಯ ಅಸ್ಪತ್ರೆ ಕಡೆಯಿಂದ ಬಂದ ಮಾರುತಿ ಇಕೋ ಕಾರು ಮೊದಲು ನಿಂತಿದ್ದ ಒಂದು ಕಾರು ಮತ್ತು ಆಟೋಗೆ ಡಿಕ್ಕಿ ಹೊಡೆದಿದೆ. ಬಳಿಕ ರಸ್ತೆ ಬದಿ ನಿಂತಿದ್ದ ವಾಸುಗೆ ಗುದ್ದಿ, ನಂತರ ಡಿಯೋ ಸ್ಕೂಟರ್​ನಲ್ಲಿದ್ದ ರಘು ಮತ್ತು ಚಿರಂಜೀವಿ ಅವರಿಗೆ ಡಿಕ್ಕಿ ಹೊಡೆದಿದೆ.

- Advertisement -

ಘಟನೆ ಬಳಿಕ ಸ್ಥಳೀಯರು ಕಾರು ತಡೆದು ನಿಲ್ಲಿಸಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ಮೂವರ ಪೈಕಿ ಆಕಾಶ್​​ ಎಂಬುವರು ಕಾರಿನಿಂದ ಕೆಳಗೆ ಇಳಿದಿದ್ದು, ಉಳಿದ ಇಬ್ಬರು ಕಾರಿನ ಸಹಿತ ಎಸ್ಕೇಪ್ ಆಗಿದ್ದಾರೆ. ಆಕಾಶ್​​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಕಾಶ್​ ಮಾಗಡಿ ಜಿಲ್ಲಾ ಪಂಚಾಯತಿ ಸದಸ್ಯರ ಮಗ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಸದಾಶಿವನಗರ ಸಂಚಾರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp