ಕಡಬ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ‌ ಹಿಟ್ ಆ್ಯಂಡ್ ರನ್; ಓರ್ವ ಮೃತ್ಯು

Prasthutha|

ಮಂಗಳೂರು: ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಲಾವತ್ತಡ್ಕದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.

- Advertisement -

ದುರ್ಘಟನೆಯಲ್ಲಿ ಬೈಕ್ ಸವಾರ ಸಕಲೇಶಪುರ ಮೂಲದ ಅರುಣ್ ಸಾವನ್ನಪ್ಪಿದ್ದು, ಸಹ ಸವಾರ ಮೋಹನ್ ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.  

ಗುಂಡ್ಯದಿಂದ ನೆಲ್ಯಾಡಿ ಕಡೆ ತೆರಳುತ್ತಿದ್ದ ಬೈಕ್ ಗೆ ವಿರುದ್ಧ ದಿಕ್ಕಿನಿಂದ ಬಂದ ಬಸ್ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಬಸ್ಸನ್ನು ಚೇಸ್ ಮಾಡಿದ ಪೊಲೀಸರು ಗುಂಡ್ಯ ಸಮೀಪ ವಶಕ್ಕೆ ಪಡೆದಿದ್ದಾರೆ.

- Advertisement -

ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp