ಡಿಸೆಂಬರ್ 31ಕ್ಕಿಂತ ಮುಂಚಿತವಾಗಿ ಬಿಬಿಎಂಪಿ ಚುನಾವಣೆ ನಡೆಸಿ: ಬೊಮ್ಮಾಯಿ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

Prasthutha|

ಬೆಂಗಳೂರು: ಡಿಸೆಂಬರ್ 31 ಅಥವಾ ಅದಕ್ಕಿಂತಲೂ ಮುಂಚಿತವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ನಡೆಸುವಂತೆ ಬೊಮ್ಮಾಯಿ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶನ ನೀಡಿದೆ.

- Advertisement -

ಮೀಸಲಾತಿ ಅಧಿಸೂಚನೆಯನ್ನು ಪ್ರಶ್ನಿಸಿ ಹೈಕೋರ್ಟ್’ಗೆ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಅಂಗೀಕರಿಸಿ ನ್ಯಾಯಮೂರ್ತಿ ಹೇಮಂತ್ ಚಂದನ್’ಗೌಡರ್ ಅವರು ಈ ಆದೇಶ ನೀಡಿದ್ದಾರೆ.

ಒಬಿಸಿ ಜನಸಂಖ್ಯೆಗೆ ಸಂಬಂಧಿಸಿದಂತೆ ಅಂಕಿಅಂಶಗಳನ್ನು, ಒಬಿಸಿ ಮೀಸಲಾತಿಯನ್ನು ನಿರ್ಧರಿಸಲು ನೇಮಿಸಲಾದ ನ್ಯಾಯಮೂರ್ತಿ ಭಕ್ತವತ್ಸಲ ನೇತೃತ್ವದ ಆಯೋಗಕ್ಕೆ ನೀಡುವಂತೆ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಹಿಂದಿನ ಬಿಬಿಎಂಪಿ ಅವಧಿ ಸೆಪ್ಟೆಂಬರ್ 2020ರಲ್ಲಿ ಕೊನೆಗೊಂಡಿದೆ.

Join Whatsapp