ಚರ್ಚ್ ಮೇಲಿನ ದಾಳಿಯನ್ನು ಸಮರ್ಥಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ!

Prasthutha|

ಬೆಂಗಳೂರು: ಕರ್ನಾಟಕದಲ್ಲಿ ಚರ್ಚ್ ಮೇಲಿನ ದಾಳಿಯನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಸಮರ್ಥಿಸಿಕೊಂಡಿದ್ದಾರೆ.

- Advertisement -

ಈ ಕುರಿತು NDTVಗೆ ಪ್ರತಿಕ್ರಿಯಿಸಿದ ಸಚಿವರು, ಚರ್ಚ್ ಮೇಲಿನ ದಾಳಿಗಳೆಲ್ಲಾ ಭಾಗಶಃ ಕ್ರಿಶ್ಚಿಯನ್ನರ ತಪ್ಪಿನಿಂದ ಕೂಡ ಆಗಿದೆ ಎಂದು ಹೇಳಿಕೆ ಕೊಡುವ ಮೂಲಕ ರಾಜ್ಯದ ಜನತೆಯನ್ನು ಆತಂಕಕ್ಕೆ ತಳ್ಳಿದ್ದಾರೆ.

ಚರ್ಚ್ ದಾಳಿಯ ಬಗ್ಗೆ ಕೇಳಲಾದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಗೃಹ ಸಚಿವರು, “ಎರಡೂ ಕಡೆ ತಪ್ಪುಗಳಿವೆ, ಅವರು ಬಲವಂತದ ಮತಾಂತರವನ್ನು ಮಾಡುವುದನ್ನು ನಿಲ್ಲಿಸಲಿ, ಗದ್ದಲವನ್ನು ಸೃಷ್ಟಿಸುವುದಿಲ್ಲ ಎಂದು ಹೇಳಿದರು. ಆದರೆ, ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳುವಂತಿಲ್ಲ. ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

Join Whatsapp