ಕರ್ನಾಟಕ ಬಂದ್ ಹಿಂಪಡೆಯಲು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ

Prasthutha|

ಬೆಂಗಳೂರು: ಕರ್ನಾಟಕ ಬಂದ್ ಕರೆ ನೀಡಿದ ಕನ್ನಡಪರ ಸಂಘಟನೆ ಗಳಿಗೆ ಬಂದ್ ಕರೆಯನ್ನು ಹಿಂಪಡೆಯಲು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಸಚಿವರು, ಕನ್ನಡ ವಿರೋಧಿ ಪುಂಡರನ್ನು ಈಗಾಗಲೇ ಬಂಧಿಸಿದ್ದು, ಕಠಿಣಕ್ರಮ ಜರಗಿಸಲಾಗುತ್ತಿದೆ.

ಸಾಂಕ್ರಮಿಕ ಕೋವಿಡ್ ಕಾರಣದಿಂದ ಈಗಾಗಲೇ ಆರ್ಥಿಕವಾಗಿ ಜರ್ಜರಿತವಾಗಿ ಸಂಕಷ್ಟಕ್ಕೆ ಒಳಗಾಗಿರುವ ಮಹಾ ಜನತೆಗೆ, ಇನ್ನಷ್ಟು ಹೊರೆಯನ್ನು ಹೇರಲು ನಾವು ಕಾರಣವಾಗಬಾರದು.

- Advertisement -

ಎಂ ಇ ಎಸ್ ಅನ್ನು ಈಗಾಗಲೇ ಬೆಳಗಾವಿ ನಗರದ ಜನತೆ ನಿಷೇಧಿಸಿದ್ದಾರೆ ಹಾಗೂ ಸರಕಾರವು, ರಾಜ್ಯದ ಜಲ, ನೆಲ ಹಾಗೂ ನುಡಿಯ ರಕ್ಷಣೆಗೆ ಬದ್ಧವಾಗಿದೆ ಎಂದು ಸಚಿವರು ಹೇಳಿದರು.

Join Whatsapp