ಇಂದಿನಿಂದ 2 ದಿನ ಗೃಹ ಸಚಿವ ಡಾ.ಪರಮೇಶ್ವರ್​ ಮಂಗಳೂರು, ಉಡುಪಿ ಪ್ರವಾಸ

Prasthutha|

ಮಂಗಳೂರು: ಗೃಹ ಸಚಿವ ಡಾ.ಪರಮೇಶ್ವರ್ ಅವರು ಇಂದಿನಿಂದ 2 ದಿನ ಮಂಗಳೂರು, ಉಡುಪಿ ಪ್ರವಾಸ ಕೈಗೊಂಡಿದ್ದಾರೆ. ಇಂದು (ಜೂನ್ 6) ಬೆಳಿಗ್ಗೆ 8.35ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಗೃಹ ಸಚಿವರು ಬೆಳಗ್ಗೆ 10 ಗಂಟೆಗೆ ಪೊಲೀಸ್ ಪಶ್ಚಿಮ ವಲಯ ಕಚೇರಿಯಲ್ಲಿ ವಲಯ ಪರಿಶೀಲನಾ ಸಭೆ ನಡೆಸಲಿದ್ದಾರೆ.

- Advertisement -

ಮಧ್ಯಾಹ್ನ 12 ಗಂಟೆಗೆ ಮಂಗಳೂರಿನ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದ್ದು, 12.30ಕ್ಕೆ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪೊಲೀಸ್ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ. ಬಳಿಕ ಮಧ್ಯಾಹ್ನ 2 ಗಂಟೆಗೆ ಉಡುಪಿಗೆ ತೆರಳಲಿದ್ದಾರೆ. ಉಡುಪಿಯಲ್ಲೂ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದು, ಸಂಜೆ 5.30ಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಬಳಿಕ ಸಂಜೆ 6 ಗಂಟೆಗೆ ಕೊಲ್ಲೂರಿಗೆ ತೆರಳಲಿದ್ದಾರೆ.

- Advertisement -

ಮಾರ್ಚ್ 7 ರಂದು ಬುಧವಾರ ಬೆಳಿಗ್ಗೆ 7 ಗಂಟೆಗೆ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದು ಪೂಜೆಯಲ್ಲಿ ಭಾಗವಹಿಸಿ ವಾಪಸ್ ಆಗಲಿದ್ದಾರೆ. ಡಾ. ಪರವೇಶ್ವರ್ ಅವರು ಗೃಹ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಮಂಗಳೂರು, ಉಡುಪಿ ಪ್ರವಾಸ ಕೈಗೊಂಡಿದ್ದಾರೆ.

Join Whatsapp