ಮನವಿ ಸಲ್ಲಿಸಲು ಬಂದ ಅಭ್ಯರ್ಥಿಗಳಲ್ಲಿ ಗೃಹ ಸಚಿವರ ದುರಹಂಕಾರ: ಕಾಂಗ್ರೆಸ್ ಆಕ್ರೋಶ

Prasthutha|

ಬೆಂಗಳೂರು: ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಮಾಡುವಂತೆ ಮನವಿ ಸಲ್ಲಿಸಲು ಬಂದ ಅಭ್ಯರ್ಥಿಗಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ದುರಹಂಕಾರ ತೋರಿದ್ದು, ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

- Advertisement -


ಈ ಬಗ್ಗೆ ವೀಡಿಯೋ ಟ್ವೀಟ್ ಮಾಡಿರುವ ಕಾಂಗ್ರೆಸ್, ಪೊಲೀಸ್ ಕಾನ್ಸ್ಟೇಬಲ್ ಅಭ್ಯರ್ಥಿಗಳು ನೇಮಕಾತಿ ಮಾಡುವಂತೆ ಮನವಿ ಸಲ್ಲಿಸಲು ಬಂದಾಗ ಗೃಹಸಚಿವರ ಉಡಾಫೆಯ, ದುರಹಂಕಾರದ ನಡವಳಿಕೆ ಇದು. ‘ಆರಗ ಜ್ಞಾನೇಂದ್ರ ಅವರೇ, ಜನರೊಂದಿಗೆ ನಡೆದುಕೊಳ್ಳುವ ರೀತಿ ಇದೇನಾ? ಉದ್ಯೋಗಕ್ಕಾಗಿ ಪರಿತಪಿಸುವ ಯುವಜನರಿಗೆ ನಿಮ್ಮ ಸ್ಪಂದನೆ ಇದೇನಾ? ಈ ದರ್ಪ, ದೌಲತ್ತುಗಳ ಆಯಸ್ಸು ಕೆಲವೇ ತಿಂಗಳುಗಳಷ್ಟೇ ನೆನಪಿರಲಿ’ ಎಂದು ಬರೆದುಕೊಂಡಿದೆ.



Join Whatsapp