ಶಿಕಾರಿಪುರಕ್ಕೆ ಗೃಹ ಸಚಿವರ ಭೇಟಿ: ಕಾನೂನು ಸುವ್ಯವಸ್ಥೆ ಪರಿಶೀಲನೆ

Prasthutha|

ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಪುರ ಪಟ್ಟಣದಲ್ಲಿ ಸ್ಥಳೀಯ ಬಂಜಾರಾ ಸಮುದಾಯದ ಪ್ರತಿಭಟನೆ ನಡೆದ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಶಿಕಾರಿಪುರಕ್ಕೆ ತೆರಳಿ, ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಬಗ್ಗೆ ಅವಲೋಕನ ನಡೆಸಿದರು.

- Advertisement -


ಲೋಕಸಭಾ ಸದಸ್ಯ ಬಿ. ವೈ. ರಾಘವೇಂದ್ರ, ಜಿಲ್ಲಾ ಪೋಲಿಸ್ ಮುಖ್ಯಸ್ಥ ಮಿಥುನ್ ಕುಮಾರ್ ಸೇರಿದಂತೆ ಸ್ಥಳೀಯ ಅಧಿಕಾರಿಗಳೂ ಉಪಸ್ಥಿತರಿದ್ದರು.


ನಂತರ ಮಾಧ್ಯಮದ ಸ್ನೇಹಿತರೊಂದಿಗೆ ಮಾತನಾಡಿದ ಸಚಿವರು, ಶಿಕಾರಿಪುರ ಪಟ್ಟಣದಲ್ಲಿ ಪರಿಸ್ಥಿತಿ ತಿಳಿಯಾಗಿದೆ. ಯಾವುದೇ ಅಹಿತಕರ ಘಟನೆ ತಪ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.
ಪ್ರತಿಭಟನೆಗೆ ಸಂಬಂಧಿಸಿದಂತೆ, ಉತ್ತರಿಸಿದ ಸಚಿವರು, ಸರಕಾರ, ಪರಿಶಿಷ್ಟ ಜಾತಿ ಸಮುದಾಯಗಳಿಗೆ, ಒಳ ಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಸದಾಶಿವ ಆಯೋಗದ ಶಿಫಾರಸುಗಳನ್ನು ಅನುಷ್ಠಾನ ಮಾಡಿಲ್ಲ. ಈ ಕುರಿತು ವಿರೋಧ ಪಕ್ಷದ ನಾಯಕರು ಅಪಪ್ರಚಾರ ನಡೆಸಿ ರಾಜಕೀಯ ಬೇಳೆ ಬೇಯಿಸಲು ಹೊರಟಿದ್ದಾರೆ.

- Advertisement -


ಚುನಾವಣೆಯ ಹೊಸ್ತಿಲಲ್ಲಿ ಕಾಂಗ್ರೆಸ್ ನಾಯಕರು, ಪರಿಶಿಷ್ಟ ಜಾತಿ ಪಂಗಡಗಳ ಮಧ್ಯೆ ಒಡಕು ಮೂಡಿಸಲು ಯತ್ನಿಸುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಯಾವುದೇ ಕ್ರಮಕ್ಕೆ ಮುಂದಾಗದೆ ನ್ಯಾಯ ಒದಗಿಸಲು ವಿಫಲರಾದ, ವಿರೋಧಿ ಪಕ್ಷದ ನಾಯಕರು, ಒಳ ಮೀಸಲಾತಿ ವಿಷಯಕ್ಕೆ ಸಂಬಂಧಿಸಿ ದಂತೆ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಆಪಾದಿಸಿದ್ದಾರೆ.


ಒಳಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಮುಕ್ತವಾಗಿ ಚರ್ಚೆ ನಡೆಸಲು ಸಿದ್ದರಿದ್ದು, ಯಾವುದೇ ಕಾರಣಕ್ಕೂ ಯಾರೇ ಆಗಲಿ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು ಎಂದು ಹೇಳಿದ್ದಾರೆ.

Join Whatsapp