ಮರ್ಯಾದಾ ಹತ್ಯೆ: ಅನ್ಯ ಸಮುದಾಯದವನನ್ನು ಮದುವೆಯಾದ ಮಗಳು; ಅಳಿಯನನ್ನು ಕೊಂದ ಮಾವ

Prasthutha|

ಬಾಗಲಕೋಟೆ: ತನ್ನ ಮಗಳು ಅನ್ಯ ಸಮುದಾಯದವನನ್ನು ಪ್ರೀತಿಸಿ ಮದುವೆಯಾದ ಕಾರಣ ತಂದೆಯೇ ಮಗಳ ಪತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಮಖಂಡಿ ತಾಲೂಕಿನ ಟಕ್ಕೋಡ ಗ್ರಾಮದಲ್ಲಿ ನಡೆದಿದೆ.

- Advertisement -

ಜೈನ ಸಮುದಾಯಕ್ಕೆ ಸೇರಿದ ಭುಜಬಲಿ ಕರ್ಜಗಿ (34) ಹತ್ಯೆಯಾದ ಯುವಕ. ಇದೇ ಗ್ರಾಮದ ಭಾಗ್ಯಶ್ರೀ ತಂದೆ ತಮ್ಮನಗೌಡ ಹಾಗೂ ಮೂವರು ಸೇರಿ ಹತ್ಯೆ ಮಾಡಿದ್ದಾರೆ.

ಕ್ಷತ್ರಿಯ ಸಮಾಜದ ತಮ್ಮನಗೌಡ ಪಾಟೀಲರ ಪುತ್ರಿ ಭಾಗ್ಯಶ್ರೀ ಹಾಗೂ ಒಕ್ಕಲುತನ ಮಾಡುತ್ತಿದ್ದ ಭುಜಬಲಿ ಕರ್ಜಗಿ ಪ್ರೀತಿಸುತ್ತಿದ್ದರು. ಎಂಟು ತಿಂಗಳ ಹಿಂದೆ ರಿಜಿಸ್ಟರ್ ಮದುವೆಯಾಗಿದ್ದರು. ಆದರೆ  ಗ್ರಾಮಕ್ಕೆ ಬಂದಿರಲಿಲ್ಲ. ಪೊಲೀಸ್ ಠಾಣೆಯಲ್ಲಿ ಎರಡೂ ಮನೆಯವರ ನಡುವೆ ಸಂಧಾನ ನಡೆದ ನಂತರ ಇಬ್ಬರೂ ನಾಲ್ಕು ತಿಂಗಳಿನಿಂದ ಗ್ರಾಮದಲ್ಲಿ ವಾಸಿಸುತ್ತಿದ್ದರು.

- Advertisement -

ಶನಿವಾರ ರಾತ್ರಿ ಹನುಮಾನ ದೇವರ ಪಲ್ಲಕ್ಕಿ ಉತ್ಸವ ಮುಗಿಸಿ ಸಹೋದರನ ಪುತ್ರ ಸುಮೇದ್ ಜತೆ ದ್ವಿಚಕ್ರ ವಾಹನದಲ್ಲಿ ಭುಜಬಲಿ ಹೋಗುತ್ತಿದ್ದಾಗ ಖಾರದಪುಡಿ ಎರಚಿ ಕಬ್ಬು ಕಟಾವಿಗೆ ಬಳಸುವ ಹರಿತವಾದ ವಸ್ತುವಿನಿಂದ ಇರಿದು ಕೊಲೆ ಮಾಡಲಾಗಿದೆ ಎಂದು ಸಾವಳಗಿ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಆರೋಪಿ ತಮ್ಮನಗೌಡ ಪಾಟೀಲನನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಇನ್ ಸ್ಪೆಕ್ಟರ್ ಮನೋಹರ ಕಂಚಗಾರ ತಿಳಿಸಿದ್ದಾರೆ.

Join Whatsapp