ಮರ್ಯಾದಾ ಹತ್ಯೆ: ಪ್ರೀತಿಗೆ ಬಿದ್ದ ಹಿರಿ ಮಗಳ ಹತ್ಯೆಗೈದ ತಂದೆ

Prasthutha|

ದೇವನಹಳ್ಳಿ: ತನ್ನ ಇಬ್ಬರು ಮಕ್ಕಳ ಸರಣಿ ಪ್ರೀತಿಯಿಂದ ಮನನೊಂದ ವ್ಯಕ್ತಿಯೊಬ್ಬರು ಮರ್ಯಾದೆಗೆ ಅಂಜಿ ಹಿರಿ ಮಗಳನ್ನೇ ಕೊಲೆ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ.

- Advertisement -


ಗ್ರಾಮದ ಕವನ ( 20 ) ಮೃತ ಯುವತಿ ಎಂದು ಗುರುತಿಸಲಾಗಿದೆ. ತಂದೆ ಮಂಜುನಾಥ್ ಎಂಬುವವನು ಮಗಳನ್ನ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾರೆ.
ಕಳೆದ ಮಂಗಳವಾರವಷ್ಟೇ ಬೆರೊಬ್ಬನ ಜೊತೆ ಪ್ರೀತಿ ಮಾಡಿದ್ದ ಕಿರಿಯ ಮಗಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಳು. ಠಾಣೆಯಲ್ಲಿ ಪ್ರೀತಿಸಿದವನ ಜೊತೆ ಹೋಗೋದಾಗಿ ಕಿರಿ ಮಗಳು ಹೇಳಿದ್ದಳು. ಹೀಗಾಗಿ ಪೊಲೀಸರು ಮಂಜುನಾಥ್ ಅವರ ಕಿರಿ ಮಗಳನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಿ ಕೊಟ್ಟಿದ್ದರು.


ಇದರ ಬೆನ್ನಲ್ಲೇ ಹಿರಿ ಮಗಳು ಸಹ ಪ್ರೀತಿ ಬಲೆಗೆ ಬಿದ್ದಿರುವ ವಿಚಾರ ತಂದೆಗೆ ತಿಳಿದಿದೆ. ಹೀಗಾಗಿ ಇಬ್ಬರ ನಡುವೆ ನಿನ್ನೆ ರಾತ್ರಿ ಜಗಳವಾಗಿದೆಯಂತೆ. ಚಿಕ್ಕ ಮಗಳು ಮರ್ಯಾದೆ ಕಳೆದಳು. ಈಗ ಇವಳು ಮರ್ಯಾದೆ ಕಳೆಯುತ್ತಾಳೆ ಅಂತಾ ರಾತ್ರಿ ಹೊತ್ತು ಮಲಗಿದ್ದ ಮಗಳನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

Join Whatsapp