ಭೀಮಾತೀರದಲ್ಲಿ ಮರ್ಯಾದೆ ಹತ್ಯೆ : ಪ್ರೇಯಸಿಯ ಕಣ್ಣೆದುರೇ ಪ್ರಿಯಕರನ ಬರ್ಬರ ಕೊಲೆ

Prasthutha|

ವಿಜಯಪುರ : ಭೀಮಾತೀರದಲ್ಲಿ ಮರ್ಯಾದೆ ಹತ್ಯೆ ನಡೆದಿದ್ದು ಪ್ರೇಯಸಿಯ ಕಣ್ಣೆದುರೇ ಪ್ರಿಯಕರನನ್ನು ಬರ್ಬರವಾಗಿ ಕೊಲೆ ಮಾಡಿರುವ ದುರ್ಘಟನೆ ಆಲಮೇಲ ತಾಲೂಕಿನ ಬಳಗಾನೂರ ಗ್ರಾಮದಲ್ಲಿ ನಡೆದಿದೆ.

- Advertisement -


ಪ್ರೇಯಸಿಯ ಕಣ್ಣೆದುರೇ ಪ್ರಿಯಕರ ರವಿ ನಿಂಬರಗಿ(32)ಯನ್ನು ಭೀಕರವಾಗಿ ಕೊಲೆಗೈದು ಶವವನ್ನೂ ಕೊಂಡೊಯ್ದಿದ್ದಾರೆ.ಕಳೆದ ಮೂರ್ನಾಲ್ಕು ವರ್ಷದಿಂದ ಅನ್ಯಕೋಮಿನ ಯುವತಿಯನ್ನು ಪ್ರೀತಿಸುತ್ತಿದ್ದ ರವಿಯನ್ನು ಕೊಲೆಗೈಯಲು ಸಂಚು ರೂಪಿಸಲಾಗಿತ್ತು.

8 ಮಂದಿಯ ತಂಡ ದಾಳಿ ಮಾಡಿರವಿಯನ್ನು ಕೊಲೆಗೈದಿದೆ. ವಿಷಯ ತಿಳಿಯುತ್ತಿದ್ದಂತೆ ಯುವಕನ ಮನೆಗೆ ಓಡೋಡಿ ಬಂದು ಯುವತಿ ವಿಷಯ ಮುಟ್ಟಿಸಿದ್ದಾರೆ. ಈ ಸಂಬಂಧ ಆಲಮೇಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಕೊಲೆಗಾರರು ಹಾಗೂ ಮೃತದೇಹದ ಪತ್ತೆಗೆ ತೀವ್ರ ಶೋಧ ಕೈಗೊಂಡಿದ್ದಾರೆ.

Join Whatsapp