Home ಟಾಪ್ ಸುದ್ದಿಗಳು ಆದಿತ್ಯನಾಥ್ ರಾಜ್ಯದಲ್ಲಿ ಹಾಡಹಗಲೇ ಹತ್ಯೆ : ಸಿಸಿಟಿವಿಯಲ್ಲಿ ಭೀಕರ ದೃಶ್ಯ

ಆದಿತ್ಯನಾಥ್ ರಾಜ್ಯದಲ್ಲಿ ಹಾಡಹಗಲೇ ಹತ್ಯೆ : ಸಿಸಿಟಿವಿಯಲ್ಲಿ ಭೀಕರ ದೃಶ್ಯ

ಲಖನೌ: ಉತ್ತರ ಪ್ರದೇಶದಲ್ಲಿ ವ್ಯಕ್ತಿಯೊಬ್ಬನನ್ನು ಹಾಡುಹಗಲೇ ನಡು ರಸ್ತೆಯಲ್ಲಿ ಭೀಕರವಾಗಿ ಹತ್ಯೆ ನಡೆಸಲಾಗಿದೆ. ಈ ಹತ್ಯೆಯ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ದುಷ್ಕರ್ಮಿಗಳಿಂದ ಭೀಕರವಾಗಿ ಕೊಲೆಯಾದ ವ್ಯಕ್ತಿಯನ್ನು ಸಾಜಿದ್ ಎಂದು ಗುರುತಿಸಲಾಗಿದ್ದು, ಮೂವರ ತಂಡ ಇರಿದು ಕೊಲ್ಲುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಎರಡನೇ ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿದ ಆದಿತ್ಯನಾಥ್ ಅವರ ಉತ್ತರ ಪ್ರದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಅಪರಾಧ ಕೃತ್ಯ ಹೆಚ್ಚಾಗುತ್ತಿದ್ದು, ಈ ಕೊಲೆ ಅಲ್ಲಿನ ಗೂಂಡಾ ಪ್ರವೃತ್ತಿಗೆ ಹಿಡಿದ ಕೈಗನ್ನಡಿ ಎಂದು ಸಾರ್ವಜನಿಕರು ಆಕ್ರೋಶ ವ್ಯಕಪಡಿಸಿದ್ದಾರೆ.

ಈ ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.

Join Whatsapp
Exit mobile version