ಹೊಸನಗರ: ವಿದ್ಯುತ್ ತಗುಲಿ ರೈತ ಸಾವು

Prasthutha|

ರಿಪ್ಪನ್‌ಪೇಟೆ : ತೋಟದಲ್ಲಿ ಕೆಲಸ ಮಾಡುತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಗೊಂಡು ರೈತನೋರ್ವ ಮೃತಪಟ್ಟ ಘಟನೆ ಬೆಳ್ಳೂರು ಗ್ರಾಮದಲ್ಲಿ ನಡೆದಿದೆ.

- Advertisement -


ಹಿರಿಯಣ್ಣ (58) ಮೃತ ವ್ಯಕ್ತಿ.ಕೃಷಿ ಕೆಲಸಕ್ಕಾಗಿ ತೋಟಕ್ಕೆ ಹೋದಾಗ ಪಂಪ್ ಸೆಟ್ ಗೆ ಅಳವಡಿಸಿದ್ದ ವೈರ್ ಸರಿಮಾಡುವಾಗ 11 ಕೆವಿ ವಿದ್ಯುತ್ ಲೈನಿಗೆ ಏಣಿ ತಾಗಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.


ಮೃತರು ಪತ್ನಿ, ಓರ್ವ ಪುತ್ರ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಸಂತಾಪ ಸೂಚಿಸಿದ್ದಾರೆ.

Join Whatsapp