ಯಾರೋ ಹೆಣ್ಣು ಮಗಳು ದೂರು ಕೊಟ್ಟ ಮಾತ್ರಕ್ಕೆ ಬಂಧನ ಅಂದರೆ ಹೇಗೆ?: ಶಾಮನೂರು ಶಿವಶಂಕರಪ್ಪ

Prasthutha|

ದಾವಣಗೆರೆ: ಯಾರೋ ಹೆಣ್ಣು ಮಗಳು ದೂರು ಕೊಟ್ಟ ಮಾತ್ರಕ್ಕೆ ಬಂಧನ ಅಂದರೆ ಹೇಗೆ? ಅದಕ್ಕೆ ಅರ್ಥ ಇದೆಯೇ ಎಂದು ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪ ಪ್ರಶ್ನಿಸಿದ್ದಾರೆ. ಈ ಮೂಲಕ ಮಾಜಿ ಸಿಎಂ ಯಡಿಯೂರಪ್ಪ ಪರ ಅವರು ಮಾತನಾಡಿದ್ದಾರೆ.

- Advertisement -

ಯಡಿಯೂರಪ್ಪ ವಿರುದ್ಧದ ಪ್ರಕರಣ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೋ ದಾರಿಯಲ್ಲಿ ಹೋಗೋರು ಕಂಪ್ಲೆಂಟ್ ಕೊಟ್ರೆ ಅರೆಸ್ಟ್ ಮಾಡಬಾರದು. ಮಾಡಿದರೆ ಏನ್ ಅರ್ಥ ಎಂದು ಪ್ರಶ್ನಿಸಿದ್ದಾರೆ.

ಆಕೆ 55 ಜನರ ವಿರುದ್ಧವೂ ದೂರು ನೀಡಿದ್ದಾ‌ಳೆ. ಇಂತಹದಕ್ಕೆ ಬೆಲೆ ಇದೇಯೇ’ ಎಂದು ಪ್ರಶ್ನಿಸಿದರು.

- Advertisement -

‘ನಟ ದರ್ಶನ್ ಮಾಡಿದ್ದು ತಪ್ಪು. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಬುದ್ಧಿ ಹೇಳಿ ಕಳಿಸಬೇಕಿತ್ತು. ಅದನ್ನು ಬಿಟ್ಟು ಸಾಯುವ ಹಾಗೆ ಹೊಡೆಯಬಾರದಿತ್ತು’ ಎಂದು ಪ್ರಶ್ನೆಯೊಂದಕ್ಕೆ ಅವರು ಪ್ರತಿಕ್ರಿಯಿಸಿದರು.

‘ದರ್ಶನ್ ಮೇಲೆ ಕ್ರಮ ಕೈಗೊಳ್ಳುವಂತೆ ಅಖಿಲ ಭಾರತ ವೀರಶೈವ ಮಹಾಸಭಾದಿಂದ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ ಎಂದು ಹೇಳಿದರು.

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಹೊತ್ತು, ಪೋಕ್ಸೋ ಕೇಸ್‌ನಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೈಕೋರ್ಟ್ ರಿಲೀಫ್ ನೀಡಿದೆ. ಇಂದು ಬಿಎಸ್‌ವೈ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ವೇಳೆ ಸುದೀರ್ಘ ವಾಗದ ಪ್ರತಿವಾದ ಆಲಿಸಿದ ಹೈಕೋರ್ಟ್ ನ್ಯಾಯಪೀಠ, ಬಿಎಸ್‌ವೈಗೆ ಜಾಮೀನು ನೀಡಿದೆ.

Join Whatsapp
Exit mobile version