Home ಕರಾವಳಿ ಸಿಎಂ ಸಿದ್ದರಾಮಯ್ಯ ಮುಂದೆ ಶರಣಾಗತರಾದ 6 ಮಂದಿ ನಕ್ಸಲರು

ಸಿಎಂ ಸಿದ್ದರಾಮಯ್ಯ ಮುಂದೆ ಶರಣಾಗತರಾದ 6 ಮಂದಿ ನಕ್ಸಲರು

0

ಗೃಹ ಕಚೇರಿ ಕೃಷ್ಣಾದಲ್ಲಿ ಶಸ್ತ್ರ ತ್ಯಾಗ

ಬೆಂಗಳೂರು: ಪಶ್ಚಿಮ ಘಟ್ಟದಲ್ಲಿ ಕಳೆದ ಹಲವು ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ 6 ಮಂದಿ ನಕ್ಸಲರು ಕೊನೆಗೂ ಸಿಎಂ ಸಿದ್ದರಾಮಯ್ಯ ಮುಂದೆ ಶರಣಾಗತರಾಗಿದ್ದಾರೆ.

ಮುಂಡಗಾರು ಲತಾ, ಸುಂದರಿ ಕುತ್ಲೂರು, ವನಜಾಕ್ಷಿ ಬಾಳೆಹೊಳೆ, ಮಾರೆಪ್ಪ ಅರೋಲಿ, ವಸಂತ್, ಜಿಶಾ ಶರಣಾದ ನಕ್ಸಲರು. ಪೊಲೀಸ್ ಭದ್ರತೆಯೊಂದಿಗೆ ನಕ್ಸಲರನ್ನು ಬೆಂಗಳೂರಿನ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಗೆ ಸಂಜೆ ಹೊತ್ತಿಗೆ ಕರೆತರಲಾಯಿತು. ಬಳಿಕ ಸಿಎಂ ಸಿದ್ದರಾಮಯ್ಯ ಅವರನ್ನು ನಕ್ಸಲರು ಭೇಟಿಯಾದರು. ಈ ವೇಳೆ ನಕ್ಸಲರ ಜೊತೆ ಸಿಎಂ ಮಾತುಕತೆ ನಡೆಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್ ಮತ್ತು ಡಿಜಿಪಿ ಅಲೋಕ್ ಮೋಹನ್ ಸಮ್ಮುಖದಲ್ಲಿ ನಕ್ಸಲರು ಸಿಎಂ ಮುಂದೆ ಶರಣಾಗತಿ ಪ್ರಕ್ರಿಯೆ ನಡೆಯಿತು. 6 ಮಂದಿ ನಕ್ಸಲರು ಶಸ್ತ್ರ ತ್ಯಜಿಸಿ ಶರಣಾದರು. ಈ ವೇಳೆ ನಕ್ಸಲರ ಜೊತೆ ಅವರ ಕುಟುಂಬಸ್ಥರು ಸಹ ಹಾಜರಿದ್ದರು

NO COMMENTS

LEAVE A REPLY

Please enter your comment!
Please enter your name here

Exit mobile version