ಹುಬ್ಬಳ್ಳಿ ಘರ್ಷಣೆ: ಗಲಭೆಗೆ ಪ್ರಚೋದನೆ ಆರೋಪದಲ್ಲಿ AIMIM ಮುಖಂಡನ ಬಂಧನ

Prasthutha|

ಹುಬ್ಬಳ್ಳಿ: ಮುಸ್ಲಿಮರ ವಿರುದ್ಧ ಬಜರಂಗದಳ ಕಾರ್ಯಕರ್ತನೋರ್ವ ವಿವಾದಾತ್ಮಕ ಸ್ಟೇಟಸ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಹಳೇ ಹುಬ್ಬಳ್ಳಿಯಲ್ಲಿ ನಡೆದ ಘರ್ಷಣೆಗೆ ಪ್ರಚೋದನೆ ನೀಡಿದ ಆರೋಪದಡಿಯಲ್ಲಿ AIMIM ಮುಖಂಡ ಮುಹಮ್ಮದ್ ಆರೀಫ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -


ಪ್ರಚೋದನಕಾರಿ ವಾಟ್ಸಾಪ್ ಸ್ಟೇಟಸ್ ನಿಂದಾಗಿ ಕೆರಳಿದ್ದ ಸ್ಥಳೀಯ ಯುವಕರು ಪೊಲೀಸ್ ಠಾಣೆ ಮುಂಭಾಗ ಜಮಾಯಿಸಿ ಪ್ರತಿಭಟಿಸಿದ್ದರು. ಈ ವೇಳೆ ಪೊಲೀಸರು ಮತ್ತು ಯುವಕರ ಮಧ್ಯೆ ಘರ್ಷಣೆ ನಡೆದು ಪರಿಸ್ಥಿತಿ ವಿಕೋಪಕ್ಕೆ ತೆರಳಿತ್ತು. ಘಟನೆಗೆ ಸಂಬಂಧಿಸಿ 100ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದ್ದು, ಇದೀಗ ಗಲಭೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಎಐಎಂಐಎಂ ಮುಖಂಡನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

Join Whatsapp