ಹುಬ್ಬಳ್ಳಿ ಗಲಭೆ: ಮತ್ತೆ 8 ಆರೋಪಿಗಳ ಬಂಧನ, ಬಂಧಿತರ ಸಂಖ್ಯೆ 154ಕ್ಕೆ ಏರಿಕೆ

Prasthutha|

- Advertisement -

ಹುಬ್ಬಳ್ಳಿ : ಇತ್ತೀಚ್ಚೆಗೆ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬುಧವಾರದಂದು ಮತ್ತೆ 8 ಆರೋಪಿಯನ್ನು ಬಂಧಿಸಿದ್ದು, ಹೀಗಾಗಿ ಒಟ್ಟಾರೆ ಬಂಧಿತರ ಸಂಖ್ಯೆ 154ಕ್ಕೆ ಏರಿಕೆಯಾಗಿದೆ.

ಬಂಧನಕ್ಕೊಳಗಾಗಿರುವ ಆರೋಪಿಗಳು ನೀಡಿರುವ ಮಾಹಿತಿಯಂತೆ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲಾಗುತ್ತಿದೆ.ಆರೋಪಿಗಳಲ್ಲಿ ಕೆಲವರು ಹಾವೇರಿ, ಗದಗ, ದಾಂಡೇಲಿಯಲ್ಲಿ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ.

- Advertisement -

ಗಲಭೆ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ವಸೀಂ ಪಠಾಣ್‍ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಐದು ದಿನಗಳ ಕಾಲ ವಸೀಂನನ್ನು ಗೌಪ್ಯ ಸ್ಥಳಕ್ಕೆ ಕರೆದೊಯ್ದು ತೀವ್ರ ವಿಚಾರಣೆ ನಡೆಸಿದ್ದಾರೆ. ಏ.30ರವೆಗೆ ನ್ಯಾಯಾಂಗ ಬಂಧನವಿದ್ದು, ಧಾರವಾಡ ಕಾರಾಗೃಹದಲ್ಲಿ ಇರಿಸಲಾಗಿದೆ. ಆರೋಪಿಗಳಾದ ನಾಸೀರ್‌ ಅಹ್ಮದ್‌ ಹೊನ್ಯಾಳ ಹಾಗೂ ಆರಿಫ್‌ ನಾಗರಾಳ ಅವರನ್ನು ವಿಚಾರಣೆಗೆ ಪೊಲೀಸ್‌ ಕಸ್ಟಡಿಗೆ ಪಡೆದಿದ್ದಾರೆ.

Join Whatsapp