ಮಂಗಳೂರಿನ ದುಬೈ ಮಾರ್ಕೆಟ್ ನಲ್ಲಿ ಭಾರೀ ಅಗ್ನಿ ದುರಂತ: ಎರಡು ಮಳಿಗೆಗಳು ಸಂಪೂರ್ಣ ಭಸ್ಮ

Prasthutha|

ಮಂಗಳೂರು: ನಗರದ ಹೃದಯ ಭಾಗದಲ್ಲಿರುವ ದುಬೈ ಮಾರ್ಕೆಟ್ ನಲ್ಲಿ ಇಂದು ಮುಂಜಾನೆ ನಡೆದ ಭೀಕರ ಅಗ್ನಿ ದುರಂತದಲ್ಲಿ ಎರಡು ವಾಣಿಜ್ಯ ಮಳಿಗೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

- Advertisement -

ನಗರದ ಪ್ರಮುಖ ವಾಣಿಜ್ಯ ಮಳಿಗೆಯಾದ ದುಬೈ ಮಾರ್ಕೆಟ್ ನಲ್ಲಿ ಇಂದು ಮುಂಜಾನೆ 3 ಗಂಟೆಗೆ ವೇಳೆ ಅಗ್ನಿ ದುರಂತ ನಡೆದಿದ್ದು, ಉತ್ತರ ಭಾರತದವರಿಗೆ ಸೇರಿದ ಎರಡು ಮಳಿಗೆಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಈ ಅಗ್ನಿ ದುರಂತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

ತಕ್ಷಣ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಅಗ್ನಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಭಾರೀ ಅನಾಹುತವನ್ನು ತಪ್ಪಿಸಿದೆ ಎಂದು ಹೇಳಲಾಗಿದೆ.

Join Whatsapp