ದುಡ್ಡು, ದುಡ್ಡು ಅಂತಾಳೆ: ಹೆಂಡತಿಯ ಹಣದ ದಾಹ ನೀಗಿಸಲಾಗದೇ ಪತಿ ಆತ್ಮಹತ್ಯೆ

Prasthutha|

ಬೆಂಗಳೂರು: ಹೆಂಡತಿಯ ಹಣದ ದಾಹ ನೀಗಿಸಲಾಗದೇ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮಂಡ್ಯದ ನಾಗಮಂಗಲ ಮೂಲದ ಅಣ್ಣಯ್ಯ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

- Advertisement -


ಬಾರ್ ಒಂದರಲ್ಲಿ ಕ್ಯಾಶಿಯರ್ ಆಗಿರುವ ಅಣ್ಣಯ್ಯ ಐದು ವರ್ಷದ ಹಿಂದೆ ಉಮಾ ಎಂಬಾಕೆಯ ಜತೆ ಮದುವೆಯಾಗಿತ್ತು. ಮದುವೆ ಬಳಿಕ ಹಣದ ವಿಚಾರಕ್ಕೆ ಸಂಬಂಧಿಸಿ ಗಂಡ ಹೆಂಡತಿ ಮಧ್ಯೆ ಯಾವಾಗಲೂ ಜಗಳ ಆಗುತ್ತಿತ್ತು. ನಾನು ಎಷ್ಟು ದುಡಿದರೂ ಸಾಕಾಗುವುದಿಲ್ಲ ಹೆಂಡತಿ ದುಡ್ಡು-ದುಡ್ಡು ಎನ್ನುತ್ತಾಳೆ. ಜೀವನದಲ್ಲಿ ನೆಮ್ಮದಿಯೇ ಇಲ್ಲದಂತೆ ಆಗಿದೆ. ನನ್ನ ಸಾವಿಗೆ ಹೆಂಡತಿ ಕಾರಣ ಎಂದು ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾರೆ.

Join Whatsapp