ಕುಡಿಯಲು ಹಣ ನೀಡಲಿಲ್ಲವೆಂದು ಪತ್ನಿಯನ್ನು ಕೊಂದ ಪತಿ

Prasthutha|

ಚಿಕ್ಕಬಳ್ಳಾಪುರ: ಕುಡಿಯಲು ಹಣ ನೀಡಲಿಲ್ಲವೆಂದು ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕೊಂದು ಹಾಕಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಚಿಕ್ಕದಿಬ್ಬೂರ ಹಳ್ಳಿಯಲ್ಲಿ ನಡೆದಿದೆ.

- Advertisement -

ಗಾಯತ್ರಿ (39) ಮೃತ ಮಹಿಳೆಯಾಗಿದ್ದು, ಅಶ್ವತ್ಥಪ್ಪ ಕೊಲೆ ಮಾಡಿದ ಆರೋಪಿ.

ಗಾಯತ್ರಿ ಹಾಗೂ ಅಶ್ವತ್ಥಪ್ಪನಿಗೆ ಮದುವೆಯಾಗಿ 20 ವರ್ಷ ಕಳೆದಿದ್ದು, ಅವರಿಗೆ 18 ವಷದ ಮಗಳು ಹಾಗೂ 14 ವರ್ಷದ ಮಗನಿದ್ದಾನೆ. ಆದರೆ ಗುರುವಾರ ಮನೆಗೆ ಬಂದ ಅಶ್ವತ್ಥಪ್ಪ ಕುಡಿಯಲು ಪತ್ನಿ ಬಳಿ ಹಣ ಕೇಳಿದ್ದಾನೆ. ಆದರೆ ಗಾಯತ್ರಿ ಹಣವನ್ನು ನೀಡುವುದಿಲ್ಲ ಎಂದು ತಿಳಿಸಿದ್ದಾಳೆ. ಇದರಿಂದ ಕೋಪಗೊಂಡ ಅಶ್ವತ್ಥಪ್ಪ ಪತ್ನಿಯನ್ನು ಕೊಂದು ಹಾಕಿದ್ದಾನೆ.

Join Whatsapp