‘ಮಂಗಳೂರಿನ ಜನರ ಪ್ರೀತಿಗೆ ವಿನಮ್ರನಾಗಿರುವೆ’: ಮತ್ತೆ ಕನ್ನಡದಲ್ಲೇ ಟ್ವೀಟ್ ಮಾಡಿದ ಮೋದಿ

Prasthutha|

ನವದೆಹಲಿ: ಮಂಗಳೂರಿನಲ್ಲಿ ಶುಕ್ರವಾರ ನಡೆದ ಸಮಾವೇಶದ ಬಗ್ಗೆ ಟ್ವೀಟ್ ಮಾಡಿದ ಪ್ರಧಾನಿ ಮೋದಿ ‘ಮಂಗಳೂರಿನ ಜನರ ಪ್ರೀತಿಗೆ ವಿನಮ್ರನಾಗಿರುವೆ’ ಎಂದು ಬರೆದುಕೊಂಡಿದ್ದಾರೆ.

- Advertisement -


ಮಂಗಳೂರಿನ ಸಮಾವೇಶ ಮುಗಿಸಿ ದೆಹಲಿಗೆ ವಾಪಸ್ ಆಗಿರುವ ಮೋದಿ, ಜನರ ಪ್ರೀತಿಯ ಬಗ್ಗೆ ಟ್ವೀಟ್ ಮಾಡಿದ್ದು, ‘ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ. ಪ್ರಮುಖ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದುದು ಸಂತಸ ತಂದಿದೆ’ ಎಂದು ಹೇಳಿದ್ದಾರೆ.


ಶುಕ್ರವಾರ ಮಂಗಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಆಯೋಜನೆಗೊಂಡಿದ್ದ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ಮೋದಿ ಅವರು, ₹ 3,800 ಕೋಟಿ ಮೊತ್ತದ 8 ಯೋಜನೆಗಳಿಗೆ ಚಾಲನೆ ನೀಡಿದ್ದರು.

Join Whatsapp