ಜೆಡಿಎಸ್ ಗೆ ರಾಜೀನಾಮೆ ನೀಡುವುದು ಖಚಿತ: ಎಸ್.ಅರ್. ಶ್ರೀನಿವಾಸ್

Prasthutha|

ತುಮಕೂರು: ಜೆಡಿಎಸ್ ಗೆ ರಾಜೀನಾಮೆ ನೀಡುವುದಾಗಿ ಗುಬ್ಬಿ ಕ್ಷೇತ್ರದ ಜೆಡಿಎಸ್ ಉಚ್ಚಾ ಟಿತ ಶಾಸಕ ಎಸ್.ಅರ್. ಶ್ರೀನಿವಾಸ್  ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

- Advertisement -

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಗೆ ರಾಜೀನಾಮೆ ನೀಡಿದ ಬಳಿಕ ಬೆಂಬಲಿಗರನ್ನು ಭೇಟಿ ಮಾಡಿ ಅವರ ಅಭಿಪ್ರಾಯ ಕೇಳಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

ಕಳೆದ ತಿಂಗಳು ಕರ್ನಾಟಕದಲ್ಲಿ ನಡೆದಿದ್ದ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯವರ ಜೊತೆ ಶಾಸಕ ಶ್ರೀನಿವಾಸ್ ಕಾಣಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರು ಕಾಂಗ್ರೆಸ್ ಗೆ ಸೇರುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗಿದೆ.

- Advertisement -

ಜೂನ್ ನಲ್ಲಿ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ, ಅಡ್ಡ ಮತದಾನ ಮಾಡಿದ ಆರೋಪದ ಮೇಲೆ ಶ್ರೀನಿವಾಸ್ ಅವರನ್ನು ಜೆಡಿಎಸ್ ನಿಂದ ಉಚ್ಚಾಟಿಸಲಾಗಿತ್ತು.

Join Whatsapp