ಚನ್ನಪಟ್ಟಣ ಬೈ ಎಲೆಕ್ಷನ್​ಗೆ ನಾನೇ ಅಭ್ಯರ್ಥಿ: ಡಿಕೆ ಶಿವಕುಮಾರ್ ಹೇಳಿಕೆ

Prasthutha|

- Advertisement -

ನೆಲಮಂಗಲ: ಚನ್ನಪಟ್ಟಣ ಬೈ ಎಲೆಕ್ಷನ್ ಗೆ ನಾನೇ ಅಭ್ಯರ್ಥಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ನೆಲಮಂಗಲದ ವೀರಭದ್ರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ‘ಪ್ರಯತ್ನಕ್ಕಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನನಗೆ ನಂಬಿಕೆ ಇದೆ. ದೇಶಕ್ಕೆ, ರಾಜ್ಯಕ್ಕೆ ಒಳ್ಳೆಯ ಮಳೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಇತಿಹಾಸವಿರುವ ವೀರಭದ್ರ ಹಾಗೂ ರುದ್ರೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದ್ದೇನೆ ಎಂದರು.

- Advertisement -

ಇದೇ ವೇಳೆ ಗ್ಯಾರೆಂಟಿ ಯೋಜನೆಗಳ ಪರಿಷ್ಕರಣೆ ವಿಚಾರದ ಚರ್ಚೆ ವಿಚಾರ, ‘ಯಾವ ಸಚಿವರು ಏನೂ ಮಾತನಾಡಲ್ಲ, ಏನೂ ಇಲ್ಲ. ಅನುಕೂಲ ಇರುವವರಿಗೂ ಕೊಡುತ್ತಿದ್ದಾರೆ. ಅದಕ್ಕೆ ಅವರು ಬೇಡ ಎಂದು ಹೇಳುತ್ತಿದ್ದಾರೆ. ಅದರ ಬಗ್ಗೆ ಮುಂದೆ ಯೋಚನೆ ಮಾಡ್ತೇವೆ , ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದರು.



Join Whatsapp